ನವದೆಹಲಿ : 'ಆಮ್ ಆದ್ಮಿ ಪಕ್ಷ'ದಿಂದ ಮಾಜಿ ಶಾಸಕ ರಾಜೇಶ್ ಗರ್ಗ್ ನನ್ನು ಉಚ್ಛಾಟಿಸಲಾಗಿದೆ. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಕಾರಣ ಆಪ್ ಪಕ್ಷ ಈ ಕ್ರಮ ಕೈಗೊಂಡಿದೆ.
ನವದೆಹಲಿಯ ರೋಹಿಣಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ರಾಜೇಶ್ ಗರ್ಗ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ರಾಜೇಶ್ ಗರ್ಗ್ ಗಂಭೀರ ಆರೋಪ ಮಾಡಿದ್ದರು. ದೆಹಲಿ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಅರವಿಂದ್ ಕೇಜ್ರಿವಾಲ್ ಕಾಂಗ್ರೆಸ್ ಶಾಸಕರ ಖರೀದಿಗೆ ಮುಂದಾಗಿದ್ದರು ಎಂದು ಅರೋಪಿಸಿದ್ದರು.
ದೆಹಲಿ ಸಿ.ಎಂ ವಿರುದ್ಧ ಆರೋಪ ಮಾಡಿದ್ದರ ಹಿನ್ನೆಲೆಯಲ್ಲಿ ರಾಜೇಶ್ ಗರ್ಗ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ. ದೆಹಲಿ ಸಿ.ಎಂ ವಿರುದ್ಧ ಆರೋಪ ಮಾಡುವುದೂ ಅಲ್ಲದೇ ಅರವಿಂದ್ ಕೇಜ್ರಿವಾಲ್ ಹಾಗೂ ತಮ್ಮ ನಡುವೆ ನಡೆದಿದ್ದ ದೂರವಾಣಿ ಸಂಭಾಷಣೆಯನ್ನೂ ರೆಕಾರ್ಡ್ ಮಾಡಿದ್ದರು.
ಆಮ್ ಆದ್ಮಿ ಪಕ್ಷದಲ್ಲಿ ಉಂಟಾಗಿದ್ದ ಭಿನ್ನಾಭಿಪ್ರಾಯ ರಾಜೇಶ್ ಗರ್ಗ್ ಅವರ ಆರೋಪದಿಂದ ಮತ್ತಷ್ಟು ತೀವ್ರಗೊಂಡಿತ್ತು. ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿರುವ ಆಮ್ ಆದ್ಮಿ ಪಕ್ಷ ರಾಜೇಶ್ ಗರ್ಗ್ ಅವರನ್ನು ಪಕ್ಷದಿಂದ ಉಚ್ಛಾಟಿಸಿದೆ.