Untitled Document
Sign Up | Login    
Dynamic website and Portals
  
March 16, 2015

ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ, ಕ್ಷಮೆ ಕೇಳಲು ನಿರಾಕರಿಸಿದ ಶರದ್ ಯಾದವ್

ಕ್ಷೆಮೆಗೆ ಒತ್ತಾಯಿಸಿದ ಸ್ಮೃತಿ ಇರಾನಿ ಬಗ್ಗೆಯೇ ಮತ್ತೊಂದು ವಿವಾದಾತ್ಮಕ ಹೇಳಿಕೆ

ಶರದ್ ಯಾದವ್, ಸ್ಮೃತಿ ಇರಾನಿ ಶರದ್ ಯಾದವ್, ಸ್ಮೃತಿ ಇರಾನಿ

ನವದೆಹಲಿ : ಮಹಿಳೆಯರ ಬಗ್ಗೆ ಅಸಭ್ಯ ರೀತಿಯಲ್ಲಿ ಮಾತನಾಡಿದರೂ ತಮ್ಮ ಮೊಂಡು ವಾದವನ್ನೇ ಮುಂದುವರೆಸಿರುವ ಜೆಡಿಯು ನಾಯಕ ಶರದ್ ಯಾದವ್ ಅವರನ್ನು ಕೇಂದ್ರ ಮಾನವ ಮತ್ತು ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಹಿರಿಯ ರಾಜಕಾರಣಿಯಾಗಿರುವ ಶರದ್ ಯಾದವ್ ಅವರು ಮಹಿಳೆಯರ ಬಗ್ಗೆ ಅಸಭ್ಯ ರೀತಿಯಲ್ಲಿ ಹೇಳಿಕೆ ನೀಡುವುದನ್ನು ನಿಲ್ಲಿಸಿ ಕ್ಷಮೆಯಾಚಿಸಬೇಕು. ಮಹಿಳೆಯರ ಬಗ್ಗೆ ಅವರು ನೀಡುತ್ತಿರುವ ಹೇಳಿಕೆಯಿಂದಾಗಿ ತಪ್ಪು ಸಂದೇಶ ರವಾನೆಯಾಗುತ್ತಿದೆ ಎಂದು ಸ್ಮೃತಿ ಇರಾನಿ ರಾಜ್ಯಸಭೆ ಕಲಾಪದಲ್ಲಿ ಒತ್ತಾಯಿಸಿದ್ದಾರೆ.

ಆದರೆ ಸ್ಮೃತಿ ಇರಾನಿ ಅವರ ಮನವಿಗೂ ಆಕ್ಷೇಪಾರ್ಹ ರೀತಿಯಲ್ಲೇ ಹೇಳಿಕೆ ನೀಡಿರುವ ಶರದ್ ಯಾದವ್ ನೀವು ಎಂತಹ ಮಹಿಳೆ ಎಂದು ನನಗೆ ಗೊತ್ತು ಎಂದು ಹೇಳುವ ಮೂಲಕ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ. ಭಾರತೀಯ ಮಹಿಳೆಯರ ಮೈಬಣ್ಣದ ಬಗ್ಗೆ ನೀಡಿರುವ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವುದೂ ಸಾಲದೆಂಬಂತೆ ತಮ್ಮ ಹೇಳಿಕೆ ಬಗ್ಗೆ ಚರ್ಚೆಗೆ ಸಿದ್ಧ ಎಂದು ಶರದ್ ಯಾದವ್ ತಿಳಿಸಿದ್ದಾರೆ.

ಇದೇ ವೇಳೆ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿ ಅಖಿಲ ಭಾರತ ಪ್ರಜಾಪ್ರಭುತ್ವ ಮಹಿಳಾ ಸಂಘಟನೆ ಜೆಡಿಯು ಮುಖ್ಯಸ್ಥ ಶರದ್ ಯಾದವ್ ಅವರ ವಿರುದ್ಧ ಪ್ರತಿಭಟನೆ ನಡೆಸಲು ಸಜ್ಜಾಗಿದೆ.

ಶರದ್ ಯಾದವ್ ವಿವಾದಾತ್ಮಕ ಹೇಳಿಕೆಗೆ ಪಕ್ಷಾತೀತವಾಗಿ ವಿರೋಧ ವ್ಯಕ್ತವಾಗುತ್ತಿದ್ದರೂ, ಕ್ಷಮೆ ಕೇಳುವ ಬದಲು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವುದರಲ್ಲೇ ಶರದ್ ಯಾದವ್ ನಿರತರಾಗಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited