Untitled Document
Sign Up | Login    
Dynamic website and Portals
  
March 16, 2015

ಮಸೂದೆಗಳಿಗೆ ಅಂಗೀಕಾರ ಪಡೆಯುವ ಹಿನ್ನೆಲೆ: ಸಂಸತ್ ಅಧಿವೇಶನ ವಿಸ್ತರಣೆಯಾಗುವ ಸಾಧ್ಯತೆ

ಸಂಸತ್ ಭವನ(ಸಂಗ್ರಹ ಚಿತ್ರ) ಸಂಸತ್ ಭವನ(ಸಂಗ್ರಹ ಚಿತ್ರ)

ನವದೆಹಲಿ : ಮಹತ್ವದ ಮಸೂದೆಗಳಿಗೆ ಸಂಸತ್ ನ ಉಭಯ ಸದನಗಳಲ್ಲೂ ಅಂಗೀಕಾರ ಪಡೆಯಬೇಕಿರುವ ಹಿನ್ನೆಲೆಯಲ್ಲಿ ಸಂಸತ್ ಅಧಿವೇಶನವನ್ನು ವಿಸ್ತರಿಸುವ ಸಾಧ್ಯತೆ ಇದೆ.

ಸಂಸತ್ ಅಧಿವೇಶನ ಮಾ.20ಕ್ಕೆ ಮುಕ್ತಾಯಗೊಳ್ಳಲಿದ್ದು, ನರೇಂದ್ರ ಮೋದಿ ಸರ್ಕಾರದ ಹಲವು ಮಹತ್ವಾಕಾಂಕ್ಷಿ ಮಸೂದೆಗಳು ಅಂಗೀಕಾರವಾಗದೇ ಹಾಗೆಯೇ ಉಳಿದಿದೆ. ಈ ಹಿನ್ನೆಲೆಯಲ್ಲಿ ಮಸೂದೆಗಳಿಗೆ ಅಂಗೀಕಾರ ಪಡೆಯಲು ಬಜೆಟ್ ಅಧಿವೇಶನವನ್ನು ವಿಸ್ತರಿಸುವ ಸಾಧ್ಯತೆ ಇದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಪ್ರಸಕ್ತ ಅಧಿವೇಶನದಲ್ಲೇ ರಾಜ್ಯಸಭೆಯಲ್ಲಿ ಕಲ್ಲಿದ್ದಲು ಮಸೂದೆ ಹಾಗೂ ಖನಿಜಗಳ ಮಸೂದೆಗೆ ಅಂಗೀಕಾರ ಪಡೆಯುವುದು ಕೇಂದ್ರ ಸರ್ಕಾರಕ್ಕೆ ಅಗತ್ಯವಾಗಿದೆ. ಇದೇ ವೇಳೆ ಲೋಕಸಭೆಯಲ್ಲಿ ಅಂಗೀಕಾರ ಪಡೆದಿರುವ ಭೂಸ್ವಾಧೀನ ಕಾಯ್ದೆ ಮಸೂದೆಗೆ ರಾಜ್ಯಸಭೆಯಲ್ಲೂ ಅಂಗೀಕಾರ ಪಡೆಯುವುದು ಮುಖ್ಯವಾಗಿದೆ. ಆದರೆ ಭೂಸ್ವಾಧೀನ ಕಾಯ್ದೆ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸುವ ಬಗ್ಗೆ ಕೇಂದ್ರ ಸರ್ಕಾರ ಈ ವರೆಗೂ ಯಾವುದೇ ಮಾಹಿತಿ ನೀಡಿಲ್ಲ. ವಿಪಕ್ಷಗಳೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಿದ ಬಳಿಕ ರಾಜ್ಯಸಭೆಯಲ್ಲಿ ಭೂಸ್ವಾಧೀನ ಮಸೂದೆಯನ್ನು ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ.

ಪ್ರಸಕ್ತ ಸಾಲಿನ ಬಜೆಟ್ ಅಧಿವೇಶನದ ಪ್ರಥಮ ಭಾಗ ಮಾ.20ಕ್ಕೆ ಮುಕ್ತಾಯಗೊಳ್ಳಲಿದ್ದು, ಮೇ.8ರವರೆಗೂ ಬಜೆಟ್ ಅಧಿವೇಶನದ 2ನೇ ಭಾಗ ಮುಂದುವರೆಯಲಿದೆ. ಅಧಿವೇಶನದ ಪ್ರಥಮಾರ್ಧವನ್ನು ವಿಸ್ತರಿಸುವ ಸಾಧ್ಯತೆ ಇದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited