ಬೆಂಗಳೂರು : ಧಕ್ಷ ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯಿಸಿದ್ದು, ಪ್ರಾಮಾಣಿಕ ಅಧಿಕಾರಿ ಡಿ.ಕೆ ರವಿ ಸಾವು ಆತ್ಮಹತ್ಯೆಯಲ್ಲ, ಕೊಲೆ ಎಂದು ತಿಳಿಸಿದ್ದಾರೆ.
ಅವರಂತ ಪ್ರಾಮಾಣಿಕ ಅಧಿಕಾರಿ ನಮ್ಮನ್ನು ಅಗಲಿದ್ದಾರೆ ಎನ್ನಲು ದುಖವಾಗಿತ್ತದೆ. ಅವರು ನಿರ್ಭಯವಾಗಿ ಕೆಲಸಮಾಡುತ್ತಿದ್ದ, ಯಾವುದೇ ರಾಜಕಾರಣಿಗಳ ಒತ್ತಡಕ್ಕೆ ಮಣಿಯದ ಭ್ರಷ್ಟರ ವಿರುದ್ಧ ಸಮರ ಸಾರಿದಂತ ಅಧಿಕಾರಿಯಾಗಿದ್ದರು ಎಂದರು.
ಡಿ.ಕೆ ರವಿ ನಿಗೂಢ ಸಾವಿನ ಕುರಿತು ಕೂಲಂಕುಷ ತನಿಖೆ ನಡೆಸುವಂತೆ ವಿಧಾನಪರಿಷತ್ ಕಲಾಪದಲ್ಲಿ ನಾನು ಪ್ರಸ್ತಾಪ ಮಾಡುತ್ತೇನೆ ಎಂದು ಹೇಳಿದರು.
ಅವರು ಮಾಡಿದ ಜನಪರ ಕಾರ್ಯಗಳ ಬಗ್ಗೆ ಅವರು ಹೋದ ಜಿಲ್ಲೆಗಳಲ್ಲಿ ಅಲ್ಲಿನ ಜನತೆ ಇವರೆ ನಮಗೆ ನಾಯಕರಾಗಬೇಕು ಎಂದು ಒತ್ತಾಯಿಸುತ್ತಿದ್ದರು. ಅಷ್ಟರ ಮಟ್ಟಿಗೆ ಜನರು ಅವರನ್ನು ನೆಚ್ಚಿಕೊಂಡಿದ್ದರು. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂಬ ರೀತಿಯಲ್ಲಿ ಬಿಂಬಿಸಲಾಗಿದೆ. ಆದರೆ ಸಿಂಹ ಎಂದಿಗೂ ಆತ್ಮಹತ್ಮಹತ್ಯೆ ಮಾಡಿಕೊಳ್ಳಲ್ಲ. ಡಿ.ಕೆ ರವಿ ಸಾವು ವ್ಯವಸ್ಥಿತವಾಗಿ ನಡೆಸಿದ ಕೊಲೆ ಎಂದು ಆರೋಪಿಸಿದ್ದಾರೆ.