ಬೆಂಗಳೂರು : ನಿಗೂಢವಾಗಿ ಮೃತಪಟ್ಟಿದ್ದ ವಾಣಿಜ್ಯ ತೆರಿಗೆ ಆಯುಕ್ತ ಡಿ.ಕೆ ರವಿ ಅವರ ಮರಣೋತ್ತರ ಪರೀಕ್ಷೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆಸಲಾಗಿದೆ.
ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ವಿಧಿವಿಜ್ನಾನ ಪ್ರಯೋಗಾಲಯದ ಡಾ.ವೆಂಕಟರಾಘವ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮರಣೋತ್ತರ ಪರೀಕ್ಷೆಯಿಂದ ಡಿ.ಕೆ ರವಿ ಅವರದ್ದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ಸ್ಪಷ್ಟವಾಗಲಿದೆ.
ಭೂ ಅಕ್ರಮಗಳನ್ನು ಬಯಲಿಗೆಳೆದು ಭೂಗಳ್ಳರ ಪಾಲಿಗೆ ಸಮಸ್ಯೆಯಾಗಿ ಕಾಡುತ್ತಿದ್ದ ಐ.ಎ.ಎಸ್ ಅಧಿಕಾರಿ ಡಿ.ಕೆ.ರವಿ ಅವರ ಮೃತದೇಹ ಮಾ.16ರ ಸಂಜೆ ಸೇಂಟ್ ಜಾನ್ ಆಸ್ಪತ್ರೆ ಸಮೀಪದ ಸೆಂಟ್ ಜಾನ್ಸ್ ಹುಡ್ ಅಪಾರ್ಟ್ ಮೆಂಟ್ ನಲ್ಲಿ ರವಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸಾವಿನ ಬಗ್ಗೆ ಅನುಮಾನಗಳು ಹುಟ್ಟಿಕೊಂಡಿದೆ.
ತೆರಿಗೆ ಕಳ್ಳರ ವಿರುದ್ಧ ವಾಣಿಜ್ಯ ತೆರಿಗೆ ಇಲಾಖೆಯ ಕಾರ್ಯಾಚರಣೆಗಳನ್ನು ಕಡಿಮೆ ಮಾಡುವಂತೆ ಡಿ.ಕೆ ರವಿ ಅವರಿಗೆ ಬೆದರಿಕೆ ಕರೆಗಳು ಬಂದಿದ್ದವು ಎಂದು ತಿಳಿದುಬಂದಿದೆ.