Untitled Document
Sign Up | Login    
Dynamic website and Portals
  
March 17, 2015

ಸುಬ್ರಹ್ಮಣ್ಯನ್ ಸ್ವಾಮಿ ಹೇಳಿಕೆ ಘರ್ಷಣೆಗೆ ಕಾರಣವಾಗುತ್ತೆ: ಪಿಡಿಪಿ

ಶ್ರೀನಗರ : ಸುಬ್ರಹ್ಮಣನ್ ಸ್ವಾಮಿ ಅವರ ವಿವಾದಾತ್ಮಕ ಹೇಳಿಕೆ ಎರಡು ಸಮುದಾಯಗಳ ನಡುವೆ ಘರ್ಷಣೆಯನ್ನುಂಟು ಮಾಡುತ್ತದೆ ಎಂದು ಪಿಡಿಪಿ ಹೇಳಿದೆ.

ಗುವಾಹಟಿಯಲ್ಲಿ ಹಾಜರಿದ್ದ ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ ಅವರು, ಮಸೀದಿ ಎಂಬುದು ಧಾರ್ಮಿಕ ಸ್ಥಳವಲ್ಲ, ಇದೊಂದು ಕಟ್ಟಡವಷ್ಟೇ. ಈ ಕಟ್ಟಡ ಯಾವಾಗ ಬೇಕಾದರು ಕೆಡವಬಹುದು. ನನ್ನ ಈ ಹೇಳಿಕೆಗೆ ಯಾರಾದರೂ ವಿರೋಧ ವ್ಯಕ್ತಪಡಿಸಿದರೆ, ಚರ್ಚಿಸಲು ನಾನು ಸಿದ್ಧನಿದ್ದೇನೆ. ಏಕೆಂದರೆ ಈ ಮಾಹಿತಿ ನನಗೆ ಸೌದಿ ಅರೇಬಿಯಾದ ಜನರಿಂದಲೇ ತಿಳಿದುಬಂದಿದ್ದು ಎಂದು ವಿವಾದ್ಮಕ ಹೇಳಿಕೆಯೊಂದನ್ನು ನೀಡಿದ್ದರು.

ಸುಬ್ರಹ್ಮಣ್ಯನ್ ಸ್ವಾಮಿ ಅವರ ಈ ಹೇಳಿಕೆ ದೇಶಾದಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ವಿವಾದ ಕುರಿತಂತೆ ಪಿಡಿಪಿಯ ವಕ್ತಾರ ನಯೀಮ್ ಅಖ್ತರ್ ಪ್ರತಿಕ್ರಿಯೆ ನೀಡಿದ್ದು, ಸುಬ್ರಹ್ಮಣ್ಯನ್ ಸ್ವಾಮಿ ಅವರ ಹೇಳಿಕೆಯನ್ನು ನಾನು ಒಪ್ಪುವುದಿಲ್ಲ. ಉನ್ನತ ಸ್ಥಾನದಲ್ಲಿರುವಂತ ಅಧಿಕಾರಿಗಳು ಈ ರೀತಿಯ ಹೇಳಿಕೆ ನೀಡುವುದು ತಪ್ಪು. ಈ ರೀತಿಯ ಹೇಳಿಕೆಗಳು ಸಮುದಾಯಗಳ ನಡುವೆ ದಂಗೆ ಏರ್ಪಡುವಂತೆ ಮಾಡುತ್ತದೆ. ಈ ಹೇಳಿಕೆಯನ್ನು ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಚರ್ಚಿಸುವಂತೆ ಮನವಿ ಇಡಲಾಗುವುದು ಎಂದು ಹೇಳಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited