Untitled Document
Sign Up | Login    
Dynamic website and Portals
  
March 17, 2015

ವಿರೋಧದ ನಡುವೆಯೂ ಡಿ.ಕೆ ರವಿ ಸಾವಿನ ಪ್ರಕರಣದ ತನಿಖೆ ಸಿಐಡಿಗೆ

ಬೆಂಗಳೂರು : ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ವಿಪಕ್ಷಗಳು ಒತ್ತಾಯಿಸಿದ್ದರೂ ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದೆ.

ಸರ್ಕಾರ, ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಜೆಡಿಎಸ್ ಹಾಗೂ ಬಿಜೆಪಿ ಸದಸ್ಯರು ಸದನದ ಭಾವಿಗಿಳಿದು ಪ್ರತಿಭಟನೆ ನಡೆಸಿದರು. ಮಾ.17ರ ಕಲಾಪ ಪ್ರಾರಂಭವಾದಾಗಿನಿಂದಲೂ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣ ವಿಧಾನ ಪರಿಷತ್ ಮತ್ತು ವಿಧಾನಸಭೆಯಲ್ಲೂ ಪ್ರತಿಧ್ವನಿಸಿತ್ತು.

ಇನ್ನು ಸಂಸತ್ ನಲ್ಲೂ ಡಿ.ಕೆ ರವಿ ಅವರ ಸಾವಿನ ಪ್ರಕರಣ ಪ್ರಸ್ತಾಪವಾಗಿದ್ದು, ಈ ಬಗ್ಗೆ ಕೇಂದ್ರ ಸರ್ಕಾರ ರಾಜ್ಯಸರ್ಕಾರಕ್ಕೆ ನಿರ್ದೇಶನ ನೀಡಿ, ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಎಂದು ಸಂಸದ ಪ್ರಹ್ಲಾದ್ ಜೋಷಿ ಆಗ್ರಹಿಸಿದ್ದಾರೆ.

ಇದೇ ವೇಳೆ ವಾಣಿಜ್ಯ ತೆರಿಗೆ ಆಯುಕ್ತರಾಗಿದ್ದ ಡಿ.ಕೆ ರವಿ ಅವರ ಮೇಲೆ ರಾಜ್ಯ ಸರ್ಕಾರದ ಹಿರಿಯ ಸಚಿವರೇ ಒತ್ತಡ ಹಾಕುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಿಐಡಿ ತನಿಖೆ ನಡೆದರೂ, ಸಚಿವರುಗಳು ತಮ್ಮ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಸತ್ಯಾಂಶ ಹೊರಬರುವುದಿಲ್ಲ ಎಂಬುದು ಪ್ರತಿಪಕ್ಷಗಳ ಆರೋಪವಾಗಿದೆ.

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಸಿದ್ದರಾಮಯ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸದೇ ಸಿಐಡಿಗೆ ವಹಿಸಿರುವುದು ರಾಜ್ಯದ ಜನತೆಯಲ್ಲಿದ್ದ ಆಕ್ರೋಶವನ್ನು ಮತ್ತಷ್ಟು ಹೆಚ್ಚಿಸಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited