ನವದೆಹಲಿ : ಕಪ್ಪುಹಣದ ವಿರುದ್ಧ ಹೋರಾಟ ನಡೆಸುವ ನಿಟ್ಟಿನಲ್ಲಿ ಹಣಕಾಸು ಸಚಿವ ಅರಣ್ ಜೇಟ್ಲಿ ಬಜೆಟ್ ನಲ್ಲಿ ಹೊಸ ಕಾನೂನು ಜಾರಿಗೆ ತರುವ ಬಗ್ಗೆ ಪ್ರಸ್ತಾಪಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟ ಸಭೆ ಅದಕ್ಕೆ ಸಂಬಂಧಿಸಿದ ಮಸೂದೆಗೆ ಒಪ್ಪಿಗೆ ನೀಡಿದೆ.
ಹಾಲಿ ಬಜೆಟ್ ಅಧಿವೇಶನದಲ್ಲಿಯೇ ಅದನ್ನು ಮಂಡಿಸಿ ಅನುಮೋದನೆ ಪಡೆದುಕೊಳ್ಳಬೇಕೆನ್ನುವುದು ಕೇಂದ್ರ ಸರ್ಕಾರದ ಇರಾದೆಯಾಗಿದೆ.
ಮಸೂದೆ ಅನುಷ್ಠಾನಕ್ಕೆ ಬಂದರೆ ತೆರಿಗೆ ಇಲಾಖೆ ಅಧಿಕಾರಿಗಳಿಗೆ ವಿದೇಶಗಳಲ್ಲಿ ಅಕ್ರಮ ಸಂಪ್ತತು, ವಾರಸುದಾರರ ವಿರುದ್ಧ ಕ್ರಮ ಕೈಗೊಳ್ಳಲು ಸುಲಭವಾಗುತ್ತದೆ. ಇದೇ ವೇಳೆ ಮಾ.20ರ ನಂತರವೂ ಅಧಿವೇಶನ ವಿಸ್ತರಿಸಬೇಕೇ ಬೇಡವೇ ಎಂಬ ಬಗ್ಗೆ ಕೇಂದ್ರ ಸಂಪುಟ ಬುಧವಾರ ನಿರ್ಧರಿಸಲಿದೆ.