Untitled Document
Sign Up | Login    
Dynamic website and Portals
  
March 23, 2015

ಉಗ್ರವಾದ ನಿಲ್ಲಿಸಿದರೆ ಮಾತ್ರ ಮಾತುಕತೆ ಸಾಧ್ಯ: ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ

ನವಾಜ್ ಷರೀಫ್-ಪ್ರಧಾನಿ ನರೇಂದ್ರ ಮೋದಿ ನವಾಜ್ ಷರೀಫ್-ಪ್ರಧಾನಿ ನರೇಂದ್ರ ಮೋದಿ

ನವದೆಹಲಿ : 'ಭಯೋತ್ಪದನೆ' ಹಾಗೂ ಹಿಂಸಾಚಾರ ರಹಿತ ವಾತಾವರಣದಲ್ಲಿ ಮಾತ್ರ ಭಾರತ-ಪಾಕಿಸ್ತಾನ ನಡುವೆ ಇರುವ ಸಮಸ್ಯೆಗಳನ್ನು ದ್ವಿಪಕ್ಷೀಯ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪಾಕಿಸ್ತಾನ ರಾಷ್ಟ್ರೀಯ ದಿನಾಚರಣೆಯ ಅಂಗವಾಗಿ ಪಾಕ್ ಪ್ರಧಾನಿ ನವಾಜ್ ಷರೀಫ್ ಗೆ ಶುಭಾಷಯ ತಿಳಿಸಿ ಬರೆದಿರುವ ಪ್ರಧಾನಿ ಮೋದಿ, ಹಿಂಸಾಚಾರ, ಭಯೋತ್ಪಾದನೆ ಇಲ್ಲದ ವಾತಾವರಣ ನಿರ್ಮಾಣವಾದರೆ ಮಾತ್ರ ಉಭಯ ದೇಶಗಳ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದ್ದಾರೆ.

ಪಾಕ್ ಪ್ರಧಾನಿ ಬರೆದಿರುವ ಪತ್ರದ ಬಗ್ಗೆ ಮೋದಿ ಮಾಡಿರುವ ಟ್ವೀಟ್ ನಿಂದ ಈ ಸುದ್ದಿ ಹೊರಬಿದ್ದಿದೆ. ಜಮ್ಮು-ಕಾಶ್ಮೀರ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ಬೆಂಬಲಿತ ಉಗ್ರರು ನಿರಂತರವಾಗಿ ದಾಳಿ ನಡೆಸುತ್ತಿದ್ದಾರೆ. ಈ ಮಧ್ಯೆ ಕಾಶ್ಮೀರ ವಿವಾದವೂ ಸೇರಿದಂತೆ ಭಾರತ-ಪಾಕಿಸ್ತಾನದ ನಡುವೆ ಹಲವು ಗಹನ ಸಮಸ್ಯೆಗಳು ಅಂತ್ಯಗೊಳ್ಳಬೇಕಿದೆ.

ಪಾಕಿಸ್ತಾನ ಪ್ರತ್ಯೇಕತಾವಾದಿಗಳನ್ನು ಹಾಗೂ ಉಗ್ರರನ್ನು ಮುಂದಿಟ್ಟುಕೊಂಡು ಭಾರತದ ವಿರುದ್ಧ ಪರೋಕ್ಷ ಯುದ್ಧ ಮಾಡುತ್ತಿದೆ ಎಂದು ಇತ್ತೀಚೆಗಷ್ಟೇ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದರು. ಈ ಬೆನ್ನಲ್ಲೇ ಪ್ರಧಾನಿ ಮೋದಿ ಸಹ ಪಾಕ್ ಪ್ರಧಾನಿಗೆ ಎಚ್ಚರಿಕೆ ನೀಡಿದ್ದು, ಉಭಯ ದೇಶಗಳ ನಡುವೆ ದ್ವಿಪಕ್ಷೀಯ ಮಾತುಕತೆ ನಡೆಯಬೇಕಾದರೆ, ಭಯೋತ್ಪಾದನೆ ಹಾಗೂ ಹಿಂಸೆಯನ್ನು ನಿಲ್ಲಿಸಬೇಕು ಎಂದು ಷರತ್ತು ವಿಧಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited