Untitled Document
Sign Up | Login    
Dynamic website and Portals
  
March 24, 2015

ಬೆಂಗಳೂರಲ್ಲಿ ಅಪಘಾತ ತಡೆಗೆ ಕ್ರಮ: ಕೆ.ಜೆ.ಜಾರ್ಜ್

BW News Bureau : ಬೆಂಗಳೂರು ನಗರದಲ್ಲಿ ರಸ್ತೆ ಅಪಘಾತ ತಡೆ ಹಾಗೂ ಸುಗಮ ಸಂಚಾರಕ್ಕೆ ಸ್ಕೈವಾಕ್, ಪಾದಚಾರಿ ಮಾರ್ಗ, ಸಬ್‌ ವೇ ಗಳನ್ನು ನಿರ್ಮಿಸುವ ಮೂಲಕ ವ್ಯಾಪಕ ಕ್ರಮ ಜರುಗಿಸಲಾಗುತ್ತಿದೆ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ಬಿಜೆಪಿಯ ಡಾ.ಅಶ್ವತ್ಥನಾರಾಯಣ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಬಿಬಿಎಂಪಿ, ಬಿಡಿಎ ಜತೆಗೂಡಿ ಸಬ್‌ ವೇ, ಫೆಲಿಖಾನ್ ಲೈಟ್, ಝೀಬ್ರಾ ಕ್ರಾಸಿಂಗ್, ಸ್ಕೈವಾಕ್‌ ಗಳ ಸಂಖ್ಯೆ ಹೆಚ್ಚಿಸಲಾಗುವುದು ಎಂದರು.

ಮೇಖ್ರಿ ವೃತ್ತದಿಂದ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರಗೆ 2013ರಿಂದ ಈ ವರೆಗೆ ಒಟ್ಟು 638 ಅಪಘಾತಗಳು ಸಂಭವಿಸಿದ್ದು 121 ಜನ ಮೃತಪಟ್ಟಿದ್ದಾರೆ. ಹೆಬ್ಬಾಳ ಮೇಲ್ಸೇತುವೆಯಿಂದ ಕೆ.ಆರ್.ಪುರ-ಸರ್ಜಾಪುರ ರಿಂಗ್ ರಸ್ತೆಯಲ್ಲಿ 353 ಅಪಘಾತಗಳು ಆಗಿದ್ದು, 80 ಮಂದಿ ಮೃತಪಟ್ಟಿದ್ದಾರೆ. ಹಾಗೆಯೇ ನಾಯಂಡಹಳ್ಳಿಯಿಂದ ಬನ್ನೇರುಘಟ್ಟ ರಿಂಗ್ ರಸ್ತೆಯಲ್ಲಿ 185 ಅಪಘಾತಗಳು ಸಂಭವಿಸಿದ್ದು, 27 ಮಂದಿ ಮೃತಪಟ್ಟಿದ್ದಾರೆ. ಒಟ್ಟಾರೆ ಕಳೆದ ಎರಡು ವರ್ಷಗಳಿಂದ ಬೆಂಗಳೂರು ನಗರದಲ್ಲಿ 834 ಅಪಘಾತಗಳು ಸಂಭವಿಸಿದ್ದು, 113 ಮಂದಿ ಮೃತಪಟ್ಟಿದ್ದಾರೆ ಎಂದು ಮಾಹಿತಿ ಒದಗಿಸಿದರು.

ಅಶ್ವಥ್ ನಾರಾಯಣ ವಿಷಯ ಪ್ರಸ್ತಾಪಿಸಿ, ನಗರದಲ್ಲಿ ಸಿಗ್ನಲ್ ಲೈಟ್, ಸ್ಕೈವಾಕರ್, ಅಂಡರ್ ಪಾಸ್, ಕಾಮಗಾರಿ ತ್ವರತಿಗತಿಯಲ್ಲಿ ಆಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಸ್ತೆ ಅಪಘಾತಗಳಲ್ಲಿ ಪಾದಚಾರಿಗಳು ಮೃತಪಡುತ್ತಿದ್ದು, ಅವರ ಸುರಕ್ಷತೆಗೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ವಿವರ ನೀಡುವಂತೆ ಆಗ್ರಹಿಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited