Untitled Document
Sign Up | Login    
Dynamic website and Portals
  
March 25, 2015

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: ಪ್ರಸಕ್ತ ರಜಕೀಯ ಬೆಳವಣಿಗೆ ಕುರಿತು ಚರ್ಚೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಐಎ ಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ವಿನಾ ಕಾರಣ ತಮ್ಮನ್ನು ಹಾಗೂ ಪಕ್ಷವನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು.

ವಿರೋಧ ಪಕ್ಷಗಳ ದಾಳಿಯನ್ನು ಎದುರಿಸಲು ಶಾಸಕರ ಬೆಂಬಲವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೋರಿದ ವೇಳೆ ಒಕ್ಕೂರಲಿನಿಂದ ಎಲ್ಲಾ ಶಾಸಕರು ಇದಕ್ಕೆ ಸಮ್ಮತಿಸಿದರೆಂದು ಹೇಳಲಾಗಿದೆ. ಐಎಎಸ್ ಅಧಿಕಾರಿ ಡಿ.ಕೆ. ರವಿಯವರ ಸಾವಿನ ಪ್ರಕರಣ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಬೆಂಬಲಕ್ಕೆ ಮೂರ್ನಾಲ್ಕು ಸಚಿವರನ್ನು ಹೊರತುಪಡಿಸಿ ಮಿಕ್ಕ ಸಚಿವರು ಮೌನ ವಹಿಸಿದ್ದಕ್ಕೂ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕೆಲ ಶಾಸಕರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಾಲ್ಕು ಪ್ರಕರಣಗಳನ್ನು ಸಿಬಿಐ ಗೆ ವಹಿಸಿದೆ. ಆದರೆ ಈ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ, ಕಾಂಗ್ರೆಸ್ ಪಕ್ಷ ಎಷ್ಟೇ ಒತ್ತಾಯಿಸಿದರೂ ಒಂದೇ ಒಂದು ಪ್ರಕರಣವನ್ನು ಸಿಬಿಐ ಗೆ ವಹಿಸಲಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಈ ಹಿಂದೆ ಬಿಜೆಪಿ ಹಾಗೂ ಜೆಡಿಎಸ್ ಸರ್ಕಾರದಲ್ಲಿ ನಡೆದ ಕೆಲ ಪ್ರಕರಣಗಳನ್ನು ಸಿಬಿಐ ಗೆ ವಹಿಸುವಂತೆ ಒತ್ತಾಯಿಸಲಾಗಿದೆ ಎಂದು ತಿಳಿದುಬಂದಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited