Untitled Document
Sign Up | Login    
Dynamic website and Portals
  
March 26, 2015

ಜಾಹೀರಾತು ಮಾಫಿಯಾಗೆ ಕಡಿವಾಣ ಹಾಕಲು ಹೊಸ ನೀತಿ: ಸಿದ್ದರಾಮಯ್ಯ

ಸಿ.ಎಂ ಸಿದ್ದರಾಮಯ್ಯ ಸಿ.ಎಂ ಸಿದ್ದರಾಮಯ್ಯ

BW News Bureau : ಬೆಂಗಳೂರನ್ನು ಕಾಡುತ್ತಿರುವ ಜಾಹೀರಾತು ಮಾಫಿಯಾಕ್ಕೆ ಕಡಿವಾಣ ಹಾಕಲು ಜಾಹೀರಾತು ನೀತಿ ಜಾರಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಾ.26ರ ಅಧಿವೇಶನದ ವಿಧಾನ ಪರಿಷತ್ ಕಲಾಪದಲ್ಲಿ ಜಾಹೀರಾತು ಮಾಹಿಫಾ ಬಗ್ಗೆ ಬಿಜೆಪಿಯ ವೈ.ಎ.ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಬೆಂಗಳೂರಿನಲ್ಲಿ ದೊಡ್ಡ ಜಾಹೀರಾತು ಮಾಫಿಯಾ ಇರುವುದರಿಂದ ಸರ್ಕಾರಕ್ಕೆ ಪ್ರತಿವರ್ಷ ನೂರಾರು ಕೋಟಿ ನಷ್ಟವಾಗುತ್ತಿದೆ ಎಂದು ಸಿ.ಎಂ ತಿಳಿಸಿದ್ದಾರೆ.

ಸರ್ಕಾರಕ್ಕೆ ಉಂಟಾಗುತ್ತಿರುವ ನಷ್ಟವನ್ನು ತಡೆಗಟ್ಟಲು 2006ರ ಕಾಯ್ದೆಗೆ ತಿದ್ದುಪಡಿ ತಂದು ಹೊಸ ಜಾಹೀರಾತು ನೀತಿಯನ್ನು ಜಾರಿ ಮಾಡಲಾಗುವುದು ಎಂದು ಸಿ.ಎಂ ತಿಳಿಸಿದ್ದಾರೆ. ನಗರದ ಸೌಂದರ್ಯ ಹಾಳಾಗದಂತೆ ಹಾಗೂ ಸಂಚಾರ ವ್ಯವಸ್ಥೆಗೆ ಅಡಚಣೆಯಾಗದಂತೆ ಹಾಲಿ ಇರುವ ಅಧಿಕೃತ ಮತ್ತು ಅನಧಿಕೃತ ಜಾಹೀರಾತುಗಳನ್ನು ತೆರವು ಮಾಡಲಾಗುವುದು ಎಂದು ಹೇಳಿದ್ದಾರೆ. ಒಂದು ವೇಳೆ ತೆರವುಗೊಳಿಸಲು ಹಿಂದೇಟು ಹಾಕಿದರೆ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಸಿಎಂ ಎಚ್ಚರಿಸಿದ್ದಾರೆ.

ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ವೈ.ಎ.ನಾರಾಯಣಸ್ವಾಮಿ ಜಾಹೀರಾತು ಮಾಫಿಯಾ ನಗರದಲ್ಲಿ ಬಹಳ ದೊಡ್ಡ ಮಟ್ಟದಲ್ಲಿ ಕೆಲಸ ಮಾಡುತ್ತಿದೆ. 21 ಸಾವಿರ ಅನಧಿಕೃತ ಜಾಹೀರಾತು ಫಲಕಗಳಿವೆ. ಪಾಲಿಕೆಗೆ ತೆರಿಗೆಯನ್ನು ಕಟ್ಟದೆ ವಂಚನೆ ಮಾಡುತ್ತಿದ್ದಾರೆ. ವಾರ್ಷಿಕ ಎರಡು ಸಾವಿರ ಕೋಟಿ ತೆರಿಗೆಯನ್ನು ಇದರಿಂದ ವಸೂಲಿ ಮಾಡಬಹುದಾಗಿದೆ ಎಂದು ಹೇಳಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : BBMP

ರಸ್ತೆ ಗುಂಡಿ ಮುಚ್ಚಲು 10 ದಿನಗಳ ಗಡುವು: ಬಿಬಿಎಂಪಿ ಅಧಿಕಾರಿಗಳಿಗೆ ಸಿಎಂ ಆದೇಶ
  • ರಸ್ತೆ ಗುಂಡಿ ಮುಚ್ಚಲು 10 ದಿನಗಳ ಗಡುವು: ಬಿಬಿಎಂಪಿ ಅಧಿಕಾರಿಗಳಿಗೆ ಸಿಎಂ ಆದೇಶ
  • ನಗರದ ರಸ್ತೆ ಗುಂಡಿಗಳನ್ನು 10 ದಿನದೊಳಗೆ ಮುಚ್ಚುವಂತೆ ಸಿಎಂ ಸಿದ್ದರಾಮಯ್ಯ ಅವರು ಬಿಬಿಎಂಪಿ ಅಧಿಕಾರಿಗಳಿಗೆ ಖಡಕ್ ಸೂಚನೆ ರವಾನಿಸಿದ್ದಾರೆ.
  • ಬಿಬಿಎಂಪಿ ನೂತನ ಆಯುಕ್ತರಾಗಿ ಮಂಜುನಾಥ್ ಪ್ರಸಾದ್ ನೇಮಕ
  • ಬೆಂಗಳೂರಲ್ಲಿ ಕಸ ವಿಂಗಡಣೆ ಕಡ್ಡಾಯಗೊಳಿಸಿ ಹೈಕೋರ್ಟ್ ಆದೇಶ; ಉಲ್ಲಂಘನೆಗೆ ಭಾರೀ ದಂಡ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited