Untitled Document
Sign Up | Login    
Dynamic website and Portals
  
March 27, 2015

ಜರ್ಮನ್ ವಿಂಗ್ಸ್ ವಿಮಾನ ದುರಂತ ಉದ್ದೇಶಪೂರ್ವಕ: ಬ್ಲಾಕ್ ಬಾಕ್ಸ್ ನಿಂದ ಬಹಿರಂಗ

ಪ್ಯಾರಿಸ್ : ಎರಡು ದಿನಗಳ ಹಿಂದೆ ದಕ್ಷಿಣ ಫ್ರಾನ್ಸ್ಆಲ್ಪ್ಸ್ ಪರ್ವತ ಶ್ರೇಣಿಗಳಲ್ಲಿ ಜರುಗಿದ ವಿಮಾನ ದುರಂತ ತಾಂತ್ರಿಕ ಕಾರಣದಿಂದ ಸಂಭವಿಸಿದ ದುರಂತವಲ್ಲ, ಬದಲಾಗಿ ಉದ್ದೇಶಪೂರ್ವಕವಾಗಿ ಮಾಡಿದ್ದು ಎಂಬುದನ್ನು ಬ್ಲಾಕ್ ಬಾಕ್ಸ್ ಬಹಿರಂಗಮಾಡಿದೆ.

ಸಹ-ಪೈಲಟ್ ಮತ್ತು ಮುಖ್ಯ ಪೈಲಟ್‍ಗ ಳ ನಡುವಿನ ಜಗಳದಲ್ಲಿ ಈ ದುರಂತ ಸಂಭವಿಸಿದ್ದು, 150 ಮಂದಿ ಸತ್ತಿದ್ದಾರೆ. ಆರಂಭದಲ್ಲಿ ಸಣ್ಣದಿದ್ದ ಜಗಳ, ಬಳಿಕ ದೊಡ್ಡದಾಗಿದೆ. ಮುಖ್ಯಪೈಲಟ್ ಅನ್ನು ಕಾಕ್‍ಪಿಟ್‍ನಿಂದ ಹೊರಹಾಕಿದ ಸಹ ಪೈಲಟ್ ವಿಮಾನವನ್ನು ಪರ್ವತಕ್ಕೆ ಡಿಕ್ಕಿ ಹೊಡೆಸಿದ್ದಾನೆ. ಅದೂ 700 ಕಿ.ಮೀ. ವೇಗದಲ್ಲಿ. ಇದರ ಜತೆಗೆ ಬ್ಲಾಕ್ಸ್‍ಬಾಕ್ಸ್‍ನಲ್ಲಿ ಕೊನೆಯ ಹತ್ತು ನಿಮಿಷಗಳ ಕಾಲ ನಡೆದ ಅವರಿಬ್ಬರ ನಡುವಿನ ವಾಕ್ಸಮರದ ಧ್ವನಿಮುದ್ರಣವೂ ಸಿಕ್ಕಿರುವುದು ಸಹಪೈಲ ಟ್‍ನ ಹೊಣೆಗೇಡಿತನಕ್ಕೆ ಪುಷ್ಠಿನೀಡಿದೆ.

ಘಟನೆಯ ಬಗ್ಗೆ ತನಿಖೆ ನಡೆಸುತ್ತಿರುವ ಬ್ರಿಸ್ ರಾಬಿನ್ ಗುರುವಾರ ಈ ಆಘಾತಕಾರಿ ಮಾಹಿತಿ ನೀಡಿದ್ದಾರೆ. ಆತನಿಗೆ ವಿಮಾನವನ್ನು ನಾಶ ಮಾಡುವುದೇ ಉದ್ದೇಶವಾಗಿತ್ತು ಎಂದು ರಾಬಿನ್ ತಿಳಿಸಿದ್ದಾರೆ.

ಕ್ಯಾಪ್ಟನ್ ನನ್ನು ಕಾಕ್ ಪಿಟ್‍ನಿಂದ ಹೊರ ಹಾಕುವುದಕ್ಕಿಂತ ಮೊದಲು ಅವರಿಬ್ಬರ ನಡುವೆ ಮುಷ್ಟಿ ಕಾಳಗ ನಡೆದಿತ್ತು. ಒಂದು ಹಂತದಲ್ಲಿ ಸಹ ಪೈಲಟ್ ಆಯಂಡ್ರೆಸ್ ಲುಬಿಟ್ಸ್ ಕ್ಯಾಪ್ಟನ್ ನತ್ತ ಕುರ್ಚಿಯನ್ನು ಎಸೆದಿದ್ದ ಎಂಬ ಅಂಶ ಬಯಲಾಗಿದೆ.

ಇಷ್ಟೆಲ್ಲ ಆಗಿದ್ದರೂ ಪ್ರಯಾಣಿಕರಿಗೆ ವಿಮಾನದಲ್ಲಿ ಏನೋ ನಡೆಯುತ್ತಿದೆ ಎಂಬ ವಿಚಾರ ಗೊತ್ತಾಗಿದ್ದು ಕೊನೆಯ ಹಂತದಲ್ಲಿ. ಸಹ ಪೈಲಟ್‍ ನ ಕೈಗೆ ವಿಮಾನದ ನಿಯಂತ್ರಣ ಬರುತ್ತಿದ್ದಂತೆ ಅದು ಹೊಯ್ದಾಡಲು ಆರಂಭವಾಯಿತು. 38 ಸಾವಿರ ಅಡಿ ಎತ್ತರದಲ್ಲಿ ಹಾರುತ್ತಿದ್ದ ವಿಮಾನ ಏಕಾಏಕಿ 5 ಸಾವಿರ ಅಡಿಗಳಿಗೆ ತಗ್ಗಿ, ಆಲ್ಪ್ಸ್ ಪರ್ವತ ಶ್ರೇಣಿಗಳಿಗೆ ಅಪ್ಪಳಿಸಿತು. ಇದೇ ವೇಳೆಯಲ್ಲೇ ಏರ್ ಟ್ರಾಫಿಕ್ ನಿಯಂತ್ರಣ ಕೊಠಡಿಗೆ ಸಹಾಯ ಕರೆಯೂ ಬಂದಿತ್ತು.

ಕ್ಯಾಪ್ಟನ್ ಮೇಲಿನ ಸಿಟ್ಟಿನಿಂದ ಸಹ ಪೈಲಟ್ ಈ ಕೃತ್ಯ ಎಸಗಿದ್ದಾನೆ. ಆತನಿಗೆ ವಿಧ್ವಂಸ ಕೃತ್ಯ ಮತ್ತು ಉಗ್ರಗಾಮಿ ಕೃತ್ಯದಲ್ಲಿ ನಂಬಿಕೆ ಇರಲಿಲ್ಲ ಎಂದು ರಾಬಿನ್ ತಿಳಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited