Untitled Document
Sign Up | Login    
Dynamic website and Portals
  
March 30, 2015

ದುಬೈ ನಗರದಲ್ಲಿ ಕರ್ನಾಟಕ ಸಂಗೀತದ ಸುಂದರ ಸಂಜೆ

ದುಬೈ ನಗರದಲ್ಲಿ ಕರ್ನಾಟಕ ಸಂಗೀತದ ಸುಂದರ ಸಂಜೆ

ದುಬೈ : ವಿದ್ವಾನ್ ಕಾಂಚನ ಈಶ್ವರ ಭಟ್ ಅವರ ಶಿಷ್ಯೆ ಶ್ರೀಮತಿ ಸ್ಮಿತಾ ನೂಜಿಬೈಲ್ ಅವರ ನೇತೃತ್ವದಲ್ಲಿ ಶುಕ್ರವಾರ , ದಿನಾಂಕ 27 ಮಾರ್ಚ್ 2015 ರಂದು ದುಬೈ ನಗರದ ಅಲ್ ಕರಾಮಾದ ಎಸ್ ಎನ್ ಜಿ ಸಭಾಂಗಣದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತಸುಂದರ ಸಂಜೆ ಕಾರ್ಯಕ್ರಮ ಯಶಸ್ವಿಯಾಗಿ ಮೂಡಿಬಂತು.

ಶ್ರೀಮತಿ ಸ್ಮಿತಾರೊಂದಿಗೆ ಅವರ ಶಿಷ್ಯರಾದ ಶ್ರೀಮತಿ ಜಯಲಕ್ಷ್ಮೀ ಪ್ರಸಾದ್, ಕು. ಸುಮಾಲಕ್ಷ್ಮೀ , ಕು. ಕ್ಷಮಾ ವೋರುಂಬುಡಿ , ಕು. ಶ್ರೇಯಾ ಶಾಂತಿ ಪ್ರಸಾದ್, ಕು. ಸುಧೀಕ್ಷಾ ಮಂಜುನಾಥ್ , ಕು. ಸಂಜನಾ ನೂಜಿಬೈಲ್ , ಅಮಿತ್ ಭಟ್ ನೆಕ್ಕರೆ ಮತ್ತು ಅನಿರುದ್ದ ಭಟ್ ನೆಕ್ಕರೆ ಭಾಗವಹಿಸಿದ್ದರು.

ಕಾರ್ಯಕ್ರಮವನ್ನು ಕು.ಸುಮಾಲಕ್ಷ್ಮೀಯವರು “ನಿನ್ನು ಕೋರಿ…” ವರ್ಣದೊಂದಿಗೆ ಆರಂಭಿಸಿದರು.ನಂತರ ಶ್ರೀ ಮುತ್ತಯ್ಯ ಭಾಗವತರ್ ಅವರ ಕೃತಿ ಅದ್ಬುತವಾಗಿ ಮೂಡಿ ಬಂತು. ಕು.ಸಂಜನಾ ಹಾಗೂ ಕು. ಸುಧೀಕ್ಷಾ ತಿಲಂಗ್ ರಾಗದಲ್ಲಿ “ತಾರಕ್ಕ ಬಿಂದಿಗೆ..” ಸುಶ್ರಾವ್ಯವಾಗಿ ಹಾಡಿದರು.

ಖರಹರ ಪ್ರಿಯ ರಾಗದಲ್ಲಿ ಅನಿರುದ್ಧ ಭಟ್ ನೆಕ್ಕರೆ ಅವರ ಕಂಠದಿಂದ “ ರಾಮ ನೀ ಸಮಾನವೆಮರು..” ಮಧುರವಾಗಿ ಹೊರಹೊಮ್ಮಿತು. ಶ್ರೀ ತ್ಯಾಗರಾಜರ ಕೃತಿ “ ತುಳಸೀದಳ…” ವನ್ನು ಕು.ಶ್ರೇಯಾ ಹಾಗೂ ಕು. ಕ್ಷಮಾ ಜಂಟಿಯಾಗಿ ಹಾಡಿದರು. ಶ್ರೀಮತಿ ಜಯಲಕ್ಷ್ಮೀ ಪ್ರಸಾದ್ ‘ ಆರಭೀ ’ ರಾಗದಲ್ಲಿ ಪಾಹಿಪರ್ವತ…ವನ್ನು ಸುಶ್ರಾವ್ಯವಾಗಿ ಹಾಡಿದರು.

ಶ್ರೀಮತಿ ಸ್ಮಿತಾ ನೂಜಿಬೈಲು ಇವರ ಕಂಠಸಿರಿಯಿಂದ ಹಲವು ಕೃತಿಗಳು ಅದ್ಭುತವಾಗಿ ಮೂಡಿ ಬಂದು ಕಿಕ್ಕಿರಿದು ಸೇರಿದ್ದ ಸಂಗೀತ ಪ್ರಿಯರ ಮನರಂಜಿಸಿತು.’ ನಾಟರಾಗ ’ ದ “ ಗಜಮುಖನೆ ಸಿದ್ಧಿದಾಯಕನೆ..” ಕೃತಿಯಿಂದ ಪ್ರಾರಂಭಗೊಂಡು ಮೋಹನ-ಕಲ್ಯಾಣಿ ರಾಗದಲ್ಲಿ ಭುವನೇಶ್ವರಿಯ .., , ಶ್ರೀರಂಜಿನಿ ರಾಗದ ಸೊಗಸುಗಾ ಮೃದಂಗ ತಾಳಮು, ಬಿಲಹರಿ ರಾಗದಲ್ಲಿ ನಾರಾಯಣ ತೀರ್ಥರ ತರಂಗ ಪೂರಯ ಮಮಕಾಮಮ್ ಗೋಪಾಲಮ್, ಮೈಸೂರು ವಾಸುದೇವಾಚಾರ್ಯ ರಚಿತ ರಾಗ ಸಿಂಹೇಂದ್ರ ಮಧ್ಯಮದಲ್ಲಿ “ ನಿನ್ನೇ ನಮ್ಮೀತಿ ..” ಶಿವರಂಜಿನಿ ರಾಗದಲ್ಲಿ --ಶಿವ ಶಿವ ರೇವತಿ ರಾಗದ “ ಪಾರ್ವತಿ ಭಗವತಿ “ ಸಿಂಧೂ ಬೈರವಿ ರಾಗದ ‘ ವೆಂಕಟಾಚಲ ನಿಲಯಂ..’ ಶ್ರೀ ಬಾಲಮುರಳೀ ಕೃಷ್ಣ ರಚಿತ ‘ ಬೃಂದಾವನಿ ‘ ರಾಗದ ‘ ತಿಲ್ಲಾನ ಪ್ರಸತ್ತುಪಡಿಸಿದ್ದು, ಸುಶ್ರಾವ್ಯವಾಗಿ ನೆರೆದಿದ್ದ ಸಂಗೀತಪ್ರಿಯರಿಂದ ಭಾರೀ ಕರತಾಡನದೊಂದಿಗೆ ಪ್ರಶಂಸೆಗೊಳಗಾಯಿತು. ಸ್ಮಿತಾ ರವರು ಪ್ರಧಾನ ರಾಗವಾಗಿ ಸಿಂಹೇಂದ್ರ ಮಧ್ಯಮವನ್ನು ಆರಿಸಿಕೊಂಡು’ ನಿನ್ನೇ ನಮ್ಮಿತಿ….’ ಕೃತಿಯನ್ನು ಉತ್ತಮವಾಗಿ ಪ್ರಸ್ತುತಪಡಿಸಿದರು. ವೆಂಕಟೇಶ್ ಅವರ ತನಿ ಆವರ್ತನ ಎಲ್ಲರ ಪ್ರಶಂಸೆಗೊಳಗಾಯಿತು. ಕಾರ್ಯಕ್ರಮವು ‘ ಮಧ್ಯಮಾವತಿ ‘ ರಾಗದ ‘ ರಾಮ ನಾಮ ಭಜರೇ ‘ ಸಮೂಹ ಗಾಯನದೊಂದಿಗೆ ಮುಕ್ತಾಯಗೊಂಡಿತು.

ವಯೊಲಿನ್ ನಲ್ಲಿ ಶ್ರೀಮತಿ ಸಂಗೀತಾ ರಾಜೇಶ್ ಹಿತವಾಗಿ ಹಾಗೂ ಮೃದಂಗದಲ್ಲಿ ಶ್ರೀ ವೆಂಕಟೇಶ್ ಸ್ಪೂರ್ತಿದಾಯಕ ಸಾಥ್ ನೀಡಿದರು.

ಶ್ರೀಮತಿ ಶಂಕರಿ ತಂತ್ರಿಯವರಿಂದ ತಮ್ಮ 10ನೇ ವಯಸ್ಸಿನಲ್ಲಿ ಸಂಗೀತಭ್ಯಾಸ ಆರಂಭಿಸಿದ ಸ್ಮಿತಾ ಅವರು ದಕ್ಷಿಣ ಕನ್ನಡ ಜಿಲ್ಲೆಯ ಕರ್ನಾಟಕ ಶಾಸ್ತ್ರೀಯ ಸಂಗೀತದ ತವರು ಎಂದೇ ಪ್ರಖ್ಯಾತವಾಗಿರುವ ಕಾಂಚನದವರಾದ ಪುತ್ತೂರಿನ ವಿದ್ವಾನ್ ಕಾಂಚನ ಈಶ್ವರ ಭಟ್ ಇವರ ಶಿಷ್ಯೆ.

ಶಾಸ್ತ್ರೀಯ ಸಂಗೀತ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿರುವ ದಿ. ವಿದ್ವಾನ್ ಕಾಂಚನ ಸುಬ್ಬರತ್ನಂ ಅವರ ಶಿಷ್ಯರಾದ ವಿದ್ವಾನ್ ಕಾಂಚನ ಈಶ್ವರ ಭಟ್ ಅವರು ಸಂಗೀತದ ಗುರು ಮಾತ್ರವಲ್ಲ ಪ್ರಸಿದ್ಧ ಮೃದಂಗವಾದಕರು. ಡಾ. ಬಾಲಮುರಳಿ ಕೃಷ್ಣ ಮೊದಲಾದ ಖ್ಯಾತ ಕಲಾವಿದರಿಗೆ ಪಕ್ಕವಾದ್ಯದಲ್ಲಿ ಸಹಕರಿಸಿದ ಖ್ಯಾತಿ ಇವರದು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Art & Culture

ಅರಮನೆ ನಗರಿಯಲ್ಲಿ ಕಳೆಕಟ್ಟಿದ ಜಂಬೂಸವಾರಿ ಮೆರವಣಿಗೆ: ಮನಸೂರೆಗೊಳ್ಳುತ್ತಿದೆ ಸಾಂಸ್ಕೃತಿಕ ಕಲಾತಂಡಗಳ ವೈಭವ
  • ಅರಮನೆ ನಗರಿಯಲ್ಲಿ ಕಳೆಕಟ್ಟಿದ ಜಂಬೂಸವಾರಿ ಮೆರವಣಿಗೆ: ಮನಸೂರೆಗೊಳ್ಳುತ್ತಿದೆ ಸಾಂಸ್ಕೃತಿಕ ಕಲಾತಂಡಗಳ ವೈಭವ
  • ವಿಶ್ವ ವಿಖ್ಯಾತ ಜಂಬೂಸವಾರಿ ಮೆರವಣಿಗೆಗೆ ವೈಭವದ ಚಾಲನೆ ದೊರೆತಿದ್ದು, ಅರಮನೆ ನಗರಿಯಲ್ಲಿ ರಾಜ ಗಾಂಭೀರ್ಯದಿಂದ ಸಾಗುತ್ತಿರುವ ಗಜೆಪಡೆಗಳು, ಸಾಂಸ್ಕೃತಿಕ ಕಲಾತಂಡಗಳು, ಚಿತ್ತಾಕರ್ಷಕ ಸ್ತಬ್ದಚಿತ್ರಗಳು ಕಣ್ಮನಸೆಳೆಯುತ್ತಿವೆ.
  • ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ
  • ಯಕ್ಷಗಾನ ಮಾಹಿತಿಗಾಗಿ ಮೊಬೈಲ್ ಆಪ್!!!
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited