Untitled Document
Sign Up | Login    
Dynamic website and Portals
  
April 1, 2015

ಪ್ರವಾಹ ಪೀಡಿತ ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ ನಡೆಯುವ ಬಗ್ಗೆ ಐಬಿ ಎಚ್ಚರಿಕೆ

ಜಮ್ಮು-ಕಾಶ್ಮೀರ : ಪ್ರವಾಹ ಪೀಡಿತ ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ಅಲ್-ಬದರ್ ಮತ್ತು ತೆಹ್ರೀಕ್-ಇ-ಜಿಹಾದ್ ಉಗ್ರ ಸಂಘಟನೆಗಳು ಜಮ್ಮು-ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದೆ. ಇದರ ಜೊತೆಯಲ್ಲೇ ಪಾಕಿಸ್ತಾನದಿಂದ ಉಗ್ರರು ಭಾರತದ ಗಡಿಯೊಳಗೆ ನುಸುಳಲು ಯೋಜನೆ ರೂಪಿಸಿದ್ದಾರೆ ಎಂದು ಗುಪ್ತಚರ ಇಲಾಖೆ ಹೇಳಿದೆ.

ಜಮ್ಮು-ಕಾಶ್ಮೀರಪೂಂಚ್ ಜಿಲ್ಲೆಯ ಜೈಲಿನ ಮೇಲೆಯೂ ಉಗ್ರರ ದಾಳಿ ನಡೆಯುವ ಸಂಭವವಿದೆ. ಹಲವು ಕ್ರಿಮಿನಲ್ ಪ್ರಕರಣದ ಅಪರಾಧಿಗಳು ಹಾಗೂ ವಿಚಾರಣೆ ಎದುರಿಸುತ್ತಿರುವ ಆರೋಪಿಗಳನ್ನು ಈ ಜೈಲಿನಲ್ಲಿ ಇರಿಸಲಾಗಿದೆ. ಇನ್ನು ಸೇನೆಯ ಕ್ಯಾಂಪ್ ಗಳ ಮೇಲೂ ಉಗ್ರರು ಕಣ್ಣಿಟ್ಟಿದ್ದು ಎಚ್ಚರಿಕೆ ವಹಿಸಬೇಕೆಂದು ಗುಪ್ತಚರ ಇಲಾಖೆ ಸೂಚನೆ ನೀಡಿದೆ.

ಪ್ರಸ್ತುತ ಜಮ್ಮು-ಕಾಶ್ಮೀರ ಪ್ರವಾಹ ಪೀಡಿತ ರಾಜ್ಯವಾಗಿದೆ. ಜನಜೀವನ ಅಸ್ತವ್ಯಸ್ಥಗೊಂಡಿರುವುದರ ಬೆನ್ನಲ್ಲೇ ಉಗ್ರರ ದಾಳಿ ನಡೆಯುವ ಸಾಧ್ಯತೆ ಬಗ್ಗೆ ಮಾಹಿತಿ ನೀಡಿರುವುದು ಜನರಿಗೆ ಮತ್ತಷ್ಟು ಆತಂಕ ಉಂಟಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited