ನವದೆಹಲಿ : 'ಎ.ಐ.ಸಿ.ಸಿ' ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಬಡ್ತಿ ನೀಡುವ ವಿಚಾರ 5 ತಿಂಗಳ ಕಾಲ ಮುಂದೂಡಲ್ಪಟ್ಟಿದೆ.
ಏಪ್ರಿಲ್ ನಲ್ಲಿ ನಡೆಯಬೇಕಿದ್ದ ಎಐಸಿಸಿ ಅಧಿವೇಶನವನ್ನು ಸೆಪ್ಟೆಂಬರ್ ನಲ್ಲಿ ನಡೆಸಲು ತೀರ್ಮಾನಿಸಲಾಗಿದ್ದು, ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ನೀಡುವ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗಿದೆ.
ಹಿರಿಯ ಕಾಂಗ್ರೆಸ್ಸಿಗರು ನೀಡಿದ ಮಾಹಿತಿ ಪ್ರಕಾರ, ಏಪ್ರಿಲ್ ನಲ್ಲಿ ಎಐಸಿಸಿ ಅಧಿವೇಶನ ನಡೆಯುವುದು ಬಹುತೇಕ ಅನುಮಾನವಾಗಿದೆ. ಎಐಸಿಸಿ ಅಧಿವೇಶನವನ್ನು ನಡೆಸುವ ಬಗ್ಗೆ ಅಧ್ಯಕ್ಷೆ ಸೋನಿಯಾ ಗಾಂಧಿ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಸೆಪ್ಟೆಂಬರ್ ನಲ್ಲಿ ನಡೆಯಲಿರುವ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರೂ ಸೇರಿದಂತೆ ಪಕ್ಷದ ವಿವಿಧ ಹಂತದ ನಾಯಕರು ಭಾಗವಹಿಸಲಿದ್ದಾರೆ. ಇದೇ ವೇಳೆ ರಾಹುಲ್ ಗಾಂಧಿಗೆ ಅಧ್ಯಕ್ಷ ಸ್ಥಾನ ನೀಡಲಾಗುವುದು ಎಂದು ತಿಳಿದುಬಂದಿದೆ.
ಇನ್ನು ಇಷ್ಟೆಲ್ಲಾ ಬೆಳವಣಿಗೆಗಳಾಗುತ್ತಿದ್ದರೂ ಸಂಸತ್ ಅಧಿವೇಶನಕ್ಕೂ ಮುನ್ನ ರಜೆ ತೆಗೆದುಕೊಂಡು ದೇಶ ಬಿಟ್ಟು ತೆರಳಿದ್ದ ರಾಹುಲ್ ಗಾಂಧಿ ಇದುವರೆಗೂ ಪತ್ತೆಯಾಗಿಲ್ಲ.