Untitled Document
Sign Up | Login    
Dynamic website and Portals
  
April 7, 2015

ಕಾಶ್ಮೀರಿ ಪಂಡಿತರ ಪುನರ್ವಸತಿಗಾಗಿ ಶೀಘ್ರವೇ ಭೂಸ್ವಾಧೀನ ಪ್ರಕ್ರಿಯೆ: ಮುಫ್ತಿ ಮೊಹಮದ್

ಜಮ್ಮು-ಕಾಶ್ಮೀರದ ಸಿ.ಎಂ ಮುಫ್ತಿ ಮೊಹಮದ್ ಸಯೀದ್ ಜಮ್ಮು-ಕಾಶ್ಮೀರದ ಸಿ.ಎಂ ಮುಫ್ತಿ ಮೊಹಮದ್ ಸಯೀದ್

ನವದೆಹಲಿ : 'ಕಾಶ್ಮೀರ'ದಿಂದ ವಲಸೆಹೋಗಿರುವ ಕಾಶ್ಮೀರಿ ಪಂಡಿತರ ಪುನರ್ವಸತಿಗಾಗಿ ನಿವೇಶನಗಳನ್ನು ನಿರ್ಮಾಣ ಮಾಡಲು ಜಮ್ಮು-ಕಾಶ್ಮೀರ ಸರ್ಕಾರ ಶೀಘ್ರವೇ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್ ತಿಳಿಸಿದ್ದಾರೆ.

ಕಾಶ್ಮೀರಿ ಪಂಡಿತರಿಗೆ ಶೀಘ್ರವೇ ಪುನರ್ವಸತಿ ಕಲ್ಪಿಸಬೇಕೆಂದು ಕೇಂದ್ರ ಸರ್ಕಾರದ ನಾಯಕರೊಂದಿಗೆ ಮಾತುಕತೆ ನಡೆಸಲು ನವದೆಹಲಿಗೆ ಆಗಮಿಸಿರುವ ಜಮ್ಮು-ಕಾಶ್ಮೀರ ಮುಖ್ಯಮಂತ್ರಿಗೆ ಗೃಹ ಸಚಿವ ರಾಜನಾಥ್ ಸಿಂಗ್ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ. ಇದಕ್ಕೆ ಮುಫ್ತಿ ಮೊಹಮದ್ ಸಯೀದ್ ಕೂಡಾ ಒಪ್ಪಿಗೆ ಸೂಚಿಸಿದ್ದು ಶೀಘ್ರವೇ ಭೂಮಿ ಸ್ವಾಧೀನ ಪಡಿಸಿಕೊಳ್ಳುವುದಾಗಿ ಹೇಳಿದ್ದಾರೆ.

ಪ್ರಸ್ತುತ 62,000 ಕಾಶ್ಮೀರಿ ಪಂಡಿತರ ಕುಟುಂಬಗಳು ಪುನರ್ವಸತಿಗಾಗಿ ನೋಂದಣಿ ಮಾಡಿಕೊಂಡಿವೆ. ಪಿಡಿಪಿ-ಬಿಜೆಪಿ ಸರ್ಕಾರ ರಚನೆ ಸಂದರ್ಭದಲ್ಲಿ ತಯಾರಿಸಲಾಗಿದ್ದ ಸಾಮಾನ್ಯ ಕನಿಷ್ಠ ಕಾರ್ಯಕ್ರಮ(common minimum programme) ನಲ್ಲಿ ಬಿಜೆಪಿ ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸಬೇಕೆಂಬ ಕಠಿಣ ಷರತ್ತು ವಿಧಿಸಿತ್ತು.

2015-16ನೇ ಸಾಲಿನ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸುವುದಕ್ಕಾಗಿ 580 ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited