ಜಮ್ಮು-ಕಾಶ್ಮೀರ : 'ಕಾಶ್ಮೀರ'ದಿಂದ ವಲಸೆಹೋಗಿರುವ ಕಾಶ್ಮೀರಿ ಪಂಡಿತರ ಪುನರ್ವಸತಿಗಾಗಿ ನಿವೇಶನಗಳನ್ನು ನಿರ್ಮಾಣ ಮಾಡಲು ಭೂಮಿ ಸ್ವಾಧೀನ ಪಡಿಸಿಕೊಳ್ಳಲಾಗುತ್ತಿದೆ ಎಂದು ಜಮ್ಮು-ಕಾಶ್ಮೀರ ಸಿ.ಎಂ ಹೇಳಿಕೆ ನೀಡಿರುವ ಬೆನ್ನಲ್ಲೇ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕರು ವಿರೋಧ ವ್ಯಕ್ತಪಡಿಸಲು ಪ್ರಾರಂಭಿಸಿದ್ದಾರೆ.
ಕಾಶ್ಮೀರಿ ಪಂಡಿತರಿಗಾಗಿ ಟೌನ್ ಶಿಪ್ ಮಾಡಲು ಸರ್ಕಾರ ಜಾಗ ನೀಡಬಾರದು. ಕಾಶ್ಮೀರಿ ಪಂಡಿತರಿಗೆ ಕಾಶ್ಮೀರದಲ್ಲಿ ನೆಲೆಸಲು ಅವಕಾಶ ನೀಡುವುದು ಮುಸ್ಲಿಮರ ವಿರುದ್ಧದ ಸಂಚಾಗಿದೆ ಎಂದು ಪ್ರತ್ಯೇಕತಾವಾದಿ ಮುಖಂಡ, ಜೆ.ಕೆ.ಎಲ್.ಎಫ್ ಅಧ್ಯಕ್ಷ ಯಾಸಿನ್ ಮಲಿಕ್ ಹೇಳಿದ್ದಾರೆ.
ಸರ್ಕಾರ ಕಾಶ್ಮೀರಿ ಪಂಡಿತರಿಗೆ ಜಾಗ ನೀಡಿದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಮಲಿಕ್ ಎಚ್ಚರಿಸಿದ್ದಾರೆ. ಕಾಶ್ಮೀರಿ ಪಂಡಿತರುಗಳು ನಮ್ಮ ಜೀವನದ ಗೌರವಾನ್ವಿತ ಮತ್ತು ಪ್ರತಿಷ್ಠೆಯ ಭಾಗವಾಗಿದ್ದಾರೆ. ಹಾಗಾಗಿ ಸರ್ಕಾರ ಅವರನ್ನು ಮತ್ತೆ ವಾಪಸ್ ಕರೆಸಿಕೊಳ್ಳುತ್ತಿದೆ ಎಂದು ಪಿಡಿಪಿ ವಕ್ತಾರ ಎಂ.ಡಿ ನಯೀಮ್ ಹೇಳಿಕೆ ನೀಡಿದ್ದರು. ಈ ಹೇಳಿಕೆ ನೀಡಿದ ಬೆನ್ನಲ್ಲೇ ಕಾಶ್ಮೀರಿ ಪ್ರತ್ಯೇಕತಾವಾದಿಗಳು ಆಕ್ರೋಶಭರಿತರಾಗಿದ್ದಾರೆ.