ಪಂಜಾಬ್ : ಅಮೃತಸರದ ಚೆಕ್ ಪೋಸ್ಟ್ ಬಳಿ ಪಾಕಿಸ್ತಾನ ಗುಂಡುಹಾರಿಸಿದ ಪರಿಣಾಮ 3 ಬಿ.ಎಸ್.ಎಫ್ ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಏ.10ರಂದು ತಡ ರಾತ್ರಿ ಈ ಘಟನೆ ನಡೆದಿದ್ದು, ಭಾರತದ ಯೋಧರು ಪಾಕಿಸ್ತಾನದ ಮೇಲೆ ಪ್ರತಿದಾಳಿ ನಡೆಸಿದ್ದಾರೆ. ಗುಂಡಿನ ದಾಳಿಯಲ್ಲಿ ಗಾಯಗೊಂಡಿರುವ ಯೋಧರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.
ಕಳೆದ ಒಂದು ತಿಂಗಳಲ್ಲಿ ಮೂರನೇ ಬಾರಿಗೆ ಪಂಜಾಬ್ ಗಡಿಯಲ್ಲಿರುವ ಭಾರತ-ಪಾಕ್ ಗಡಿಯಲ್ಲಿ ಭಾರತದ ಯೋಧರ ಮೇಲೆ ದಾಳಿ ನಡೆದಿದೆ. ರಕ್ಷಣಾ ಸಚಿವಾಲಯ ಈ ದಾಳಿಯ ಬಗ್ಗೆ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸಲಿದೆ ಎಂದು ಹೇಳಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಪಾಕಿಸ್ತಾನ ಸ್ಮಗ್ಲರ್ ಗಳು ಪಂಜಬ್ ಗಡಿ ಪ್ರದೇಶದಲ್ಲಿ ಸ್ಮಗ್ಲಿಂಗ್ ಚಟುವಟಿಗೆಳನ್ನು ತೀವ್ರಗೊಳಿಸಿದ್ದು, ಭಾರತವನ್ನು ಪ್ರವೇಶಿಸಲು ಯತ್ನಿಸಿದಾಗ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಕೆಲೆವೇ ದಿನಗಳ ಹಿಂದೆ ಪಂಜಾಬ್ ಗಡಿ ಪ್ರದೇಶದಲ್ಲಿ ak-47 ರೈಫಲ್ ಗಳನ್ನು ವಶಪಡಿಸಿಕೊಳ್ಳಲಾಗಿತ್ತು.