Untitled Document
Sign Up | Login    
Dynamic website and Portals
  
April 16, 2015

ಬೆಂಗಳೂರಿನಲ್ಲಿರುವ ಬಾಂಗ್ಲಾ ವಲಸಿಗರಿಗೆ ಗುರುತಿನ ಚೀಟಿ ನೀಡಲಾಗುತ್ತಿದೆ: ಹೆಚ್.ಡಿ.ಕೆ

ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ

BW News Bureau : ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ವಲಸಿಗರನ್ನು ಬಿಬಿಎಂಪಿ ಚುನಾವಣೆಯ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿ ಗುರುತಿನ ಚೀಟಿ ನೀಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಸುದೀಪ್ ಶೆಟ್ಟಿ ಅವರು ಅಕ್ರಮ ವಲಸಿಗರ ಕುರಿತಂತೆ ಹೊರತಂದಿರುವ ಸಿಡಿಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಸುಮಾರು 40 ರಿಂದ 50 ಸಾವಿರ ಅಕ್ರಮ ವಲಸಿಗರು ನೆಲೆಸಿದ್ದು, ಖೋಟಾ ನೋಟು ದಂಧೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇಂತವರಿಗೆ ಗುರುತಿನ ಚೀಟಿ ನೀಡಲಾಗುತ್ತಿದೆ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ರಾಮನಗರ ಸೇರಿದಂತೆ ಎಲ್ಲಾ ತಾಲೂಕುಗಳಲ್ಲಿ ನೆಲೆಸಿರುವ ಇವರು ರಾತ್ರಿ 2 ಗಂಟೆ ನಂತರ ಕೆಲಸ ಆರಂಭಿಸುತ್ತಾರೆ. ಗುಜರಿ ವಸ್ತು, ಪ್ಲಾಸ್ಟಿಕ್ ಸಂಗ್ರಹದಂತಹ ಮಾಫಿಯಾದಲ್ಲಿ ತೊಡಗಿದ್ದಾರೆ. ಕಳೆದ ಐದಾರು ವರ್ಷಗಳಿಂದ ಬೆಂಗಳೂರಿನ ದೇವರಬೀಚನಹಳ್ಳಿ, ನೈಸ್ ರಸ್ತೆ, ವರ್ತುಲ ರಸ್ತೆಗಳಲ್ಲಿ ಬಾಂಗ್ಲಾದ ಅಕ್ರಮ ವಲಸಿಗರ ಕ್ಯಾಂಪ್ ಇವೆ. ವಲಸಿಗರ ಮಕ್ಕಳು ಶಾಲೆಗೆ ಹೋಗದೇ ಬೆಂಗಳೂರಿನಲ್ಲಿ ಲಾಟರಿ, ಮಟ್ಕಾ ದಂಧೆಯಲ್ಲಿ ತೊಡಗಿಸಿಕೊಂಡು ಆತಂಕ ಸೃಷ್ಟಿಸುತ್ತಿದ್ದಾರೆ. ಹೀಗಿದ್ದರೂ ರಾಜ್ಯ ಸರ್ಕಾರ ನಿದ್ದೆ ಮಾಡುತ್ತಿದೆಯೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರನ್ನು ಮೂರು ಭಾಗಗಳನ್ನಾಗಿ ಮಾಡಲು ಹೊರಟಿರುವ ಸರ್ಕಾರ, ಬಾಂಗ್ಲಾ ವಲಸಿಗರ ಸಂಖ್ಯೆ ಜಾಸ್ತಿಯಾದರೆ, 2-3 ವಾರ್ಡ್‌ಗಳನ್ನು ಅವರಿಗೇ ಮೀಸಲಿಡುವರೇ? ಎಂದು ಪ್ರಶ್ನಿಸಿದ್ದಾರೆ. ಅಕ್ರಮ ವಲಸಿಗರ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯಪಾಲ ವಿ.ಆರ್.ವಾಲಾ ಅವರ ಗಮನಕ್ಕೆ ತರುವುದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited