Untitled Document
Sign Up | Login    
Dynamic website and Portals
  
April 25, 2015

ನೇಪಾಳ ಹಾಗೂ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಭೂಕಂಪ

ನೇಪಾಳದ ರಾಜಧಾನಿಯಲ್ಲಿ ಭಾರೀ ಹಾನಿ । ಹಲವಾರು ಕಟ್ಟಡಗಳು ನೆಲಸಮ । ಅವಶೇಷಗಳಡಿಯಲ್ಲಿ ಸಿಕ್ಕಿಕೊಂಡ ಜನ

ಸಾಂದರ್ಭಿಕ ಚಿತ್ರ ಸಾಂದರ್ಭಿಕ ಚಿತ್ರ

ನವದೆಹಲಿ : ನೇಪಾಳ, ರಾಷ್ಟ್ರ ರಾಜಧಾನಿ ದೆಹಲಿ, ಉತ್ತರ ಭಾರತ ಹಾಗೂ ಪೂರ್ವ ಭಾರತದ ಹಲವೆಡೆಗಳಲ್ಲಿ ಭೂಕಂಪ ಸಂಭವಿಸಿದೆ.

ದೆಹಲಿ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ, ಅಸ್ಸಾಂ, ಜಾರ್ಖಂಡ್, ಪಶ್ಚಿಮ ಬಂಗಾಳ ಸೇರಿದಂತೆ ಹಲವೆಡೆ ಭೂಕಂಪನದ ಅನುಭವವಾಗಿದೆ. ದೆಹಲಿಯಲ್ಲಿ ಸುಮಾರು 20 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದ್ದು, ಭಯ ಭೀತರಾದ ಜನತೆ ಮನೆ, ಕಛೇರಿ, ಕಟ್ಟಡಗಳಿಂದ ಹೊರ ಓಡಿ ಬಂದಿದ್ದಾರೆ.

ಭೂಕಂಪದ ಕೇಂದ್ರ ಬಿಂದು ನೇಪಾಳದ ಪೋಖ್ರಾದಲ್ಲಿ ಪತ್ತೆಯಾಗಿದ್ದು, ರಿಕ್ಟರ್ ಮಾಪಕದಲ್ಲಿ 7.5ರಷ್ಟು ತೀವ್ರತೆ ದಾಖಲಾಗಿದೆ. ಬೆಳಿಗ್ಗೆ 11.40ರಿಂದ 11.44ರ ಸಮಯದಲ್ಲಿ ಭೂಮಿ ಕಂಪಿಸಿದ್ದು, ನೇಪಾಳದ ಹಲವೆಡೆಗಳಲ್ಲಿ ಭಾರೀ ಹಾನಿ ಸಂಭವಿಸಿದೆ. ನೇಪಾಳದ ರಾಜಧಾನಿ ಕಟ್ಮಂಡು ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ.

ಇತ್ತೀಚಿನ ಮಾಹಿತಿಯ ಪ್ರಕಾರ ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಪ್ರಭಲ ಭೂಕಂಪ ಸಂಭವಿಸಿದೆ. ರಸ್ತೆಗಳೆಲ್ಲ ಬಾಯ್ಬಿಟ್ಟಿದ್ದು, ಕಟ್ಟಡಗಳು ಕುಸಿದು ಬಿದ್ದಿವೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಜನರು ಸಿಲುಕಿರುವ ಬಗ್ಗೆ ವರದಿಯಾಗಿದೆ. ಕಠ್ಮಂಡುವಿನ ನಗರದಾದ್ಯಂತ ಮತ್ತೆ ಮತ್ತೆ ಭೂಮಿ ಕಂಪಿಸುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ರಕ್ಷಣೆಗಾಗಿ ಸಾರ್ವಜನಿಕರು ಮೊರೆ ಇಡುತ್ತಿದ್ದಾರೆ.

ನೇಪಾಳ, ದೆಹಲಿ ಸೇರಿದಂತೆ ಉತ್ತರ ಹಾಗೂ ಪೂರ್ವ ಭಾರತದಲ್ಲಿ ಸಂಭವಿಸಿದ ಭೂಕಂಪದ ಕುರಿತು ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ್ದು, ನೇಪಾಳದಲ್ಲಿ ಪ್ರಬಲ ಭೂಕಂಪವಾದ ಬಗ್ಗೆ ಮಾಹಿತಿ ಬಂದಿದೆ ಎಂದು ತಿಳಿಸಿದ್ದಾರೆ.

ಅಲ್ಲದೇ ದೇಶದ ಎಲ್ಲೆಲ್ಲಿ ಭೂಕಂಪವಾಗಿದೆ ಎಂದು ಸ್ಪಷ್ಟವಾಗಿ ಗೊತ್ತಾಗುತ್ತಿಲ್ಲ. ಮತ್ತಷ್ಟು ಮಾಹಿತಿ ಪಡೆದು ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ದೇಶದ ಜನರ ಮೊರೆಗೆ ಸ್ಪಂದಿಸುವಂತೆ ಸಂಭಂಧ ಪಟ್ಟ ಅಧಿಕಾರಿಗಳಿದಗೆ ಸೂಚಿಸಿದ್ದೇನೆ. ಭೂಕಂಪನದ ಕುರಿತು ಕ್ಷಣ ಕ್ಷಣದ ಮಾಹಿತಿ ಪಡೆಯುತ್ತಿದ್ದು, ರಕ್ಷಣಾ ಕಾರ್ಯಾಚರಣೆಗೆ ಸೂಚಿಸಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇತ್ತೀಚಿನ ಮಾಹಿತಿ ಪ್ರಕಾರ ದೆಹಲಿಯಲ್ಲಿ ಮತ್ತೆ ಭೂಮಿ ಕಂಪಿಸಿದ್ದು, ಮಧ್ಯಾಹ್ನ 12.18ಕ್ಕೆ ಮತ್ತೊಮೆ ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 6.6ರಷ್ಟು ತೀವ್ರತೆ ದಾಖಲಾಗಿದೆ. ಈ ಹಿನ್ನಲೆಯಲ್ಲಿ ದೆಹಲಿ, ಕೊಲ್ಕತ್ತಾ ನಗರಗಳಲ್ಲಿ ಮೆಟ್ರೋ ಸಂಚಾರ ಬಂದ್ ಮಾಡಲಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Agriculture & Environment

ವರುಣನ ಆರ್ಭಟಕ್ಕೆ ತತ್ತರಿಸಿದ ಜನತೆ;ಏಳು ಜನರು ಸಾವು ಇನ್ನೂ ಎರಡುದಿನ ಕಾಲ ಭಾರೀ ಮಳೆ ಎಚ್ಚರಿಕೆ
  • ವರುಣನ ಆರ್ಭಟಕ್ಕೆ ತತ್ತರಿಸಿದ ಜನತೆ;ಏಳು ಜನರು ಸಾವು ಇನ್ನೂ ಎರಡುದಿನ ಕಾಲ ಭಾರೀ ಮಳೆ ಎಚ್ಚರಿಕೆ
  • ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸುರಿದ ಭಾರಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಅಮಳೆ ಅವಾಂತರಗಳಿಂದ ಸಂಭವಿಸಿದ ಅನಾಹುತಗಳಲ್ಲಿ ಏಳು ಜನರು ನೀರುಪಾಲಾಗಿದ್ದಾರೆ.
  • ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಬಿಹಾರ, ಒಡಿಶಾದಲ್ಲಿ ಚಂಡಮಾರುತ
  • ವರುಣನ ಅರ್ಭಟಕ್ಕೆ 8 ಜನರು ಬಲಿ: ಮೃತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ಪರಿಹಾರ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited