ನವದೆಹಲಿ : ಇತ್ತೀಚಿನ ದಿನಗಳಲ್ಲಿ ಅತೀ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಮಹಾರಾಷ್ಟ್ರ ಮತ್ತು ತೆಲಂಗಾಣ ರಾಜ್ಯಗಳಿಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಶೀಘ್ರದಲ್ಲೇ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.
ಅಲ್ಲಿನ ರೈತರ ಸಮಸ್ಯೆಗಳನ್ನು ಆಲಿಸುವುದು ರಾಹುಲ್ ಗಾಂಧಿಯ ಭೇಟಿಯ ಉದ್ದೇಶವಾಗಿದೆ. ರಜಾ ಕಳೆದು ವಾಪಸ್ ಬಂದ ರಾಹುಲ್ ಸಂಸತ್ತಿನಲ್ಲಿ ಎರಡು ಬಾರಿ ಮಾತನಾಡುವ ಮೂಲಕ ಸಕ್ರಿಯವಾಗಿದ್ದಾರೆ.
ಎರಡು ದಿನಗಳ ಹಿಂದೆಯಷ್ಟೇ ರಾಹುಲ್ ಕೇದರನಾಥ ದೇವಾಲಯಕ್ಕೂ ಭೇಟಿ ನೀಡಿದ್ದರು. ಮಹಾರಾಷ್ಟ್ರ ಮತ್ತು ತೆಲಂಗಾಣ ಪ್ರವಾಸಕ್ಕಾಗಿ ರಾಹುಲ್ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಅವರ ಈ ಭೇಟಿ ಒಂದೋ ಪಾದಯಾತ್ರೆ ಇಲ್ಲವೇ ಆತ್ಮಹತ್ಯೆಗೊಳಗಾದ ರೈತರ ಮನೆಗೆ ಭೇಟಿ ನೀಡುವುದಾಗಿರುತ್ತದೆ ಎಂದು ತಿಳಿದುಬಂದಿದೆ.