Untitled Document
Sign Up | Login    
Dynamic website and Portals
  
April 28, 2015

ನೇಪಾಳ ಭೂಕಂಪ: ನಾಲ್ಕು ಸಾವಿರ ದಾಟಿದ ಸಾವಿನ ಸಂಖ್ಯೆ

ಭಾರತೀಯ ಸೇನೆ,ಆರ್.ಎಸ್.ಎಸ್ ನಿಂದ ಚುರುಕಿನ ರಕ್ಷಣಾ ಕಾರ್ಯಾಚಾರಣೆ

ಸಂತ್ರಸ್ತ ನೇಪಾಳಿ ಜನತೆ(ಸಂಗ್ರಹ ಚಿತ್ರ) ಸಂತ್ರಸ್ತ ನೇಪಾಳಿ ಜನತೆ(ಸಂಗ್ರಹ ಚಿತ್ರ)

ಕಠ್ಮಂಡು : ಭೀಕರ ಭೂಕಂಪಕ್ಕೆ ತತ್ತರಿಸಿರುವ ನೇಪಾಳದಲ್ಲಿ ಸಾವಿನ ಸಂಖ್ಯೆ ಕ್ಷಣಕ್ಷಣಕ್ಕೂ ಏರಿಕೆಯಾಗುತ್ತಿದೆ. ಇತ್ತೀಚಿನ ವರದಿ ಪ್ರಕಾರ 4,352 ಜನರು ಭೂಕಂಪಕ್ಕೆ ಬಲಿಯಾಗಿದ್ದು, ಮೃತರ ಸಂಖ್ಯೆ 6 ಸಾವಿರ ದಾಟುವ ಸಾಧ್ಯತೆ ಇದೆ.

ಸಾವಿನ ಸಂಖ್ಯೆ ಬಗ್ಗೆ ನೇಪಾಳಗೃಹ ಸಚಿವಾಲಯ ಅಧಿಕೃತ ಮಾಹಿತಿ ಬಹಿರಂಗಪಡಿಸಿದ್ದು, ಈ ಮಾಹಿತಿ ಪ್ರಕಾರ 4,352 ಜನರು ಮೃತಪಟ್ಟಿದ್ದಾರೆ. ನೇಪಾಳಕ್ಕೆ ಭಾರತ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡುತ್ತಿದ್ದು, ರಕ್ಷಣಾ ಕಾರ್ಯಾಚರಣೆಗೆ ಸ್ಪಂಧಿಸುತ್ತಿದೆ. ಆಪರೇಷನ್ ಮೈತ್ರಿ ಹೆಸರಿನಲ್ಲಿ ಭಾರತೀಯ ಸೇನೆ ಈ ವರೆಗೂ ನೇಪಾಳದಲ್ಲಿ 5400 ಜನರನ್ನು ರಕ್ಷಿಸಿದೆ.

ಇದೇ ವೇಳೆ ಪರಿಹಾರ ಕಾರ್ಯಾಚರಣೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪರಿಶೀಲನಾ ಸಭೆ ಕರೆದಿದ್ದಾರೆ. ನೇಪಾಳ ಹಾಗೂ ಭಾರತದಲ್ಲಿ ಸಂಭವಿಸಿರುವ ಭೂಕಂಪದಿಂದ ಸಂತ್ರಸ್ತರಾಗಿರುವವರಿಗೆ ಸೂಕ್ತ ಪರಿಹಾರ ದೊರೆತಿದೆಯೇ ಇಲ್ಲವೇ ಎಂಬುದರ ಬಗ್ಗೆ ಮೋದಿ ಅವರ ರೇಸ್ ಕೋರ್ಸ್ ನಿವಾಸದಲ್ಲಿ ಸಭೆ ನಡೆಯುತಿದ್ದು, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಿರಿಯ ಸಚಿವರು ಭಾಗವಹಿಸಿದ್ದಾರೆ.

ಭೂಕಂಪಕ್ಕೆ ಸಿಲುಕಿ ನಲುಗಿರುವ ನೇಪಾಳಕ್ಕೆ ಧೈರ್ಯ ತುಂಬಿರುವ ಪ್ರಧಾನಿ ನರೇಂದ್ರ ಮೋದಿ ನಿಮ್ಮೊಂದಿಗೆ ನಾವಿದ್ದೇವೆ ಹೆದರಬೇಡಿ ಎಂದು ಅಭಯ ನೀಡಿದ್ದಾರೆ. ಭಾರತದಿಂದ ನೇಪಾಳದಲ್ಲಿ ಶಿಬಿರಗಳನ್ನು ಸ್ಥಾಪಿಸಲಾಗಿದ್ದು ನಿರಾಶ್ರಿತರಿಗೆ ಆಶ್ರಯ, ಚಿಕಿತ್ಸೆ ನೀಡಲಾಗುತ್ತಿದೆ. ಸೇನಾವಿಮಾನಗಳು ಈಗಾಗಲೇ ಟನ್ ಗಟ್ಟಲೆ ಆಹಾರ ಸಾಮಗ್ರಿಗಳನ್ನು ಹೊತ್ತೊಯ್ದಿವೆ. ಭಾರತೀಯ ಸೇನೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್.ಎಸ್.ಎಸ್)ದ ಕಾರ್ಯಕರ್ತರು, ಬಾಬಾ ರಾಮ್ ದೇವ್ ನೇತೃತ್ವದ ಸಂಘಟನೆಯ ಕಾರ್ಯಕರ್ತರು ಸಾಥ್ ನೀಡಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Agriculture & Environment

ವರುಣನ ಆರ್ಭಟಕ್ಕೆ ತತ್ತರಿಸಿದ ಜನತೆ;ಏಳು ಜನರು ಸಾವು ಇನ್ನೂ ಎರಡುದಿನ ಕಾಲ ಭಾರೀ ಮಳೆ ಎಚ್ಚರಿಕೆ
  • ವರುಣನ ಆರ್ಭಟಕ್ಕೆ ತತ್ತರಿಸಿದ ಜನತೆ;ಏಳು ಜನರು ಸಾವು ಇನ್ನೂ ಎರಡುದಿನ ಕಾಲ ಭಾರೀ ಮಳೆ ಎಚ್ಚರಿಕೆ
  • ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸುರಿದ ಭಾರಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಅಮಳೆ ಅವಾಂತರಗಳಿಂದ ಸಂಭವಿಸಿದ ಅನಾಹುತಗಳಲ್ಲಿ ಏಳು ಜನರು ನೀರುಪಾಲಾಗಿದ್ದಾರೆ.
  • ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಬಿಹಾರ, ಒಡಿಶಾದಲ್ಲಿ ಚಂಡಮಾರುತ
  • ವರುಣನ ಅರ್ಭಟಕ್ಕೆ 8 ಜನರು ಬಲಿ: ಮೃತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ಪರಿಹಾರ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited