Untitled Document
Sign Up | Login    
Dynamic website and Portals
  
April 30, 2015

ಬಂದ್ ಗೆ ವ್ಯಾಪಕ ಬೆಂಬಲ: ಬಸ್ ಸಂಚಾರ ಆರಂಭಿಸುವಂತೆ ಅಧಿಕಾರಿಗಳಿಗೆ ಪೊಲೀಸ್ ಇಲಾಖೆ ಮನವಿ

ಸಾರಿಗೆ ಬಂದ್ ಪರಿಣಾಮವಾಗಿ ಸಾರ್ವಜನಿಕರಿಗೆ ಪರದಾಟ (ಸಂಗ್ರಹ ಚಿತ್ರ) ಸಾರಿಗೆ ಬಂದ್ ಪರಿಣಾಮವಾಗಿ ಸಾರ್ವಜನಿಕರಿಗೆ ಪರದಾಟ (ಸಂಗ್ರಹ ಚಿತ್ರ)

ಬೆಂಗಳೂರು : ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಸುರಕ್ಷತಾ ಮಸೂದೆಯನ್ನು ವಿರೋಧಿಸಿ ಸರ್ಕಾರಿ ಸಾರಿಗೆ ಸಂಸ್ಥೆಗಳು ಕರೆ ನೀಡಿರುವ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಬಸ್ ಗಳು ಸಂಚರಿಸದೇ ಇರುವುದರಿಂದ ಪ್ರಯಾಣಿಕರು ತೊಂದರೆಗೊಳಗಾಗಿದ್ದು, ಕಚೇರಿಗಳಿಗೆ ತೆರಳುವ ನೌಕರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಬೆಂಗಳೂರಿನಲ್ಲಿ ಬಿ.ಎಂ.ಟಿ.ಸಿ ಬಸ್ ಗಳ ಸಂಚಾರವೂ ವ್ಯತ್ಯಯಗೊಂಡಿದ್ದು, ಕೆಲವು ಕಂಪನಿಗಳು ನೌಕರರಿಗಾಗಿ ಖಾಸಗಿ ಬಸ್ ವ್ಯವಸ್ಥೆ ಮಾಡಿವೆ. ಹಲವು ಮಂದಿ ಖಾಸಗಿ ಬಸ್ ಮೂಲಕವೇ ಕಚೇರಿಗೆ ತೆರಳುತ್ತಿದ್ದಾರೆ.

ಬಂದ್ ಹಿನ್ನೆಲೆಯಲ್ಲಿ ಕೆಂಪೇಗೌಡ ಬಸ್ ನಿಲ್ದಾಣ ಹಾಗೂ ಬಿ.ಎಂ.ಟಿ.ಸಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಬೆಂಗಳೂರು ಪಶ್ಚಿಮ ಹೆಚ್ಚುವರಿ ಆಯುಕ್ತ ಅಲೋಕ್ ಕುಮಾರ್, ಪ್ರಯಾಣಿಕರಿಗೆ ತೊಂದರೆಯುಂಟಾಗುತ್ತಿರುವ ಹಿನ್ನೆಲೆಯಲ್ಲಿ ಕೂಡಲೇ ಬಸ್ ಸಂಚಾರವನ್ನು ಪ್ರಾರಂಭಿಸುವಂತೆ ಸಾರಿಗೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಬಸ್ ಗಳಿಗೆ ಅನಾಹುತ ಉಂಟಾಗದಂತೆ ಸೂಕ್ತ ಭದ್ರತೆ ನೀಡುವುದಾಗಿಯೂ ಅಲೋಕ್ ಕುಮಾರ್ ಭರವಸೆ ನೀಡಿದ್ದಾರೆ. ಇನ್ನು ಬಂದ್ ಗೆ ಬೆಂಬಲ ನೀಡದೇ ಸಂಚರಿಸುತ್ತಿರುವ ಖಾಸಗಿ ಬಸ್ ಗಳ ಮೇಲೆ ಕಲ್ಲೆಸೆದ ಪ್ರಕರಣಗಳೂ ನಡೆದಿದೆ. ಹುಬ್ಬಳ್ಳಿಯಲ್ಲಿ ಬೇಂದ್ರೆ ಸಾರಿಗೆ ಮೇಲೆ ಕಲ್ಲೆಸದ ಪರಿಣಾಮ ಬಸ್ ನ ಗಾಜು ಪುಡಿಪುಡಿಯಾಗಿದೆ. ಮೈಸೂರಿನಲ್ಲಿ ನಗರ ಸಾರಿಗೆ ಮೇಲೆ ಕಲ್ಲೆಸೆಯಲಾಗಿದ್ದು, ಬಸ್ ನ ಹಿಂಬದಿಯ ಗಾಜು ಸಂಪೂರ್ಣ ಜಖಂಗೊಂಡಿದೆ.

ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ರಸ್ತೆ ಸಾರಿಗೆ ಸುರಕ್ಷತಾ ಮಸೂದೆಯಲ್ಲಿ ಕಠಿಣ ಅಂಶಗಳನ್ನು ಸೇರಿಸಲಾಗಿದ್ದು, ಮಸೂದೆ ಜಾರಿಯಾದರೆ ಚಾಲಕರಿಗೆ ಉಳಿಗಾಲವಿಲ್ಲ. ಆದ್ದರಿಂದ ಮಸೂದೆಯಲ್ಲಿನ ಕೆಲ ಅಂಶಗಳನ್ನು ತಿದ್ದುಪಡಿ ಮಾಡಬೇಕೆಂದು ಆಗ್ರಹಿಸಿ ಚಾಲಕರ ಸಂಘಟನೆ, ಕಾರ್ಮಿಕ ಸಂಘಟನೆ ಸೇರಿದಂತೆ ಹಲವು ಖಾಸಗಿ-ಸರ್ಕಾರಿ ಸಂಘಟನೆಗಳು ಏ.30ರಂದು ದೇಶವ್ಯಾಪಿ ಬಂದ್ ಗೆ ಕರೆ ನೀಡಿವೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Protest

ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕೆ ಎಸ್ ಒಯು ಮುಚ್ಚದಂತೆ ಎಬಿವಿಪಿ ಪ್ರತಿಭಟನೆ: ಲಘು ಲಾಠಿ ಪ್ರಹಾರ
  • ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವನ್ನು ಮುಚ್ಚಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಎಬಿವಿಪಿ ಬೃಹತ್ ಪ್ರತಿಭಟನೆ ಅರಂಭಿಸಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
  • ದೇಶವ್ಯಾಪಿ ಪೆಟ್ರೋಲ್ ಬಂಕ್ ಮುಷ್ಕರ ವಾಪಸ್
  • ಸಿಪಿಎಂ ಕಛೇರಿಗೆ ಮುತ್ತಿಗೆ: ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವರ ಬಂಧನ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited