ಕಠ್ಮಂಡು : ನೇಪಾಳದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದಾಗಿ 6,300ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, 14 ಸಾವಿರ ಮಂದಿ ಗಾಯಗೊಂಡಿದ್ದಾರೆ.
ಈ ನಡುವೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ನೇಪಾಳದ ರಾಯಭಾರ ಕಚೇರಿಗೆ ಭೇಟಿ ನೀಡಿ, ಆ ದೇಶದ ಭೂಕಂಪದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ಈ ವೇಳೆ ಕಚೇರಿಯ ಸಂದರ್ಶಕರ ಪುಸ್ತಕದಲ್ಲಿ ಸಂತಾಪ ಸಂದೇಶವನ್ನು ಬರೆದ ಅವರು, ದೂತಾವಾಸದ ಅಧಿಕಾರಿಗಳ ಜತೆ ಮಾತುಕತೆ ನಡೆಸಿದರು.
ನೇಪಾಳ ರಾಯಭಾರ ಕಛೇರಿಗೆ ಭೇಟಿ ನೀಡಿದ ವೇಳೆ ಭೂಕಂಪದಲ್ಲಿ ಮೃತಪಟ್ಟ ನೇಪಾಳಿಗರ ಕುರಿತು ಅಲ್ಲಿನ ವಿಸಿಟರ್ಸ್ ಬುಕ್ ನಲ್ಲಿ ಬರೆಯುವಾಗ ಸ್ಮಾರ್ಟ್ ಫೋನ್ ನಲ್ಲಿ ಮೊದಲೇ ದಾಖಲಾಗಿದ್ದ ಸಂದೇಶವನ್ನು ನಕಲು ಮಾಡಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ.
ನೇಪಾಳದಲ್ಲಿ ಕಳೆದ ಶನಿವಾರ ಸಂಭವಿಸಿದ ಭಾರೀ ಭೂಕಂಪದಲ್ಲಿ ಸುಮಾರು 1.4 ಲಕ್ಷ ಕಟ್ಟಡಗಳು ಸಂಪೂರ್ಣವಾಗಿ ನಾಶವಾಗಿದ್ದು, ಒಟ್ಟಾರೆ 2.50 ಲಕ್ಷಕ್ಕೂ ಅಧಿಕ ಕಟ್ಟಡಗಳು ಹಾನಿಗೀಡಾಗಿವೆ. 6,300ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, 14 ಸಾವಿರ ಮಂದಿ ಗಾಯಗೊಂಡಿದ್ದಾರೆ.