ಮುಂಬೈ : ಹಿಟ್ ಅಂಡ್ ರನ್ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿರುವ ನಟ ಸಲ್ಮಾನ್ ಖಾನ್ ಗೆ ನೀಡಲಾಗಿದ್ದ ಮಧ್ಯಂತರ ಜಾಮೀನು ಅರ್ಜಿ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ಜಾಮೀನು ಅರ್ಜಿ ಕುರಿತು ಬಾಂಬೆ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ.
ಬಾಂಬೆ ಹೈಕೋರ್ಟ್ನಲ್ಲಿ ನ್ಯಾಯಮೂರ್ತಿ ಅಭಯ್ ತಿಪ್ಸೆ ಅವರು ಇಂದು ಸಲ್ಮಾನ್ ಖಾನ್ ಜಾಮೀನು ಅರ್ಜಿ ವಿಚಾರಣೆ ನಡೆಸಲಿದ್ದು, ಸಲ್ಮಾನ್ ಖಾನ್ ಗೆ ಬೇಲ್ ಸಿಗಲಿರುವ ಬಗ್ಗೆ ಕುತೂಹಲ ಮೂಡಿದೆ.
ಸಲ್ಮಾನ್ ಪರ ಹೈಕೋರ್ಟ್ ನಲ್ಲಿ ಹರೀಶ್ ಸಾಳ್ವೆ ಬದಲು ಅಮಿತ್ ದೇಸಾಯಿ ವಾದ ಮಂಡಿಸುತ್ತಿದ್ದಾರೆ. ಸಲ್ಮಾನ್ ಖಾನ್ ಜಾಮೀನು ಅರ್ಜಿ ವಿಚಾರಣೆಯ ಹಿನ್ನಲೆಯಲ್ಲಿ ಬಾಂಬೆ ಹೈಕೋರ್ಟ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
2002ರ ಹಿಟ್ ಅಂಡ್ ರನ್ ಪ್ರಕರಣದ ವಿಚಾರಣೆ ನಡೆಸಿದ್ದ ಬಾಂಬೆ ಹೈಕೋರ್ಟ್ ಸಲ್ಮಾನ್ ಖಾನ್ ಗೆ 5 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಪ್ರಸ್ತುತ ಜಾಮೀನು ಅರ್ಜಿಗೆ ಮೇಲ್ಮನವಿ ಸಲ್ಲಿಸಿರುವ ಸಲ್ಮಾನ್ ಖಾನ್ ಪರ ವಕೀಲರು ಜಾಮೀನು ಸಿಗದೇ ಇದ್ದಲ್ಲಿ, ಶರಣಾಗತಿಗೆ ಕಾಲಾವಕಾಶ ಕೋರುವ ಸಾಧ್ಯತೆಗಳಿವೆ.