Untitled Document
Sign Up | Login    
Dynamic website and Portals
  
May 17, 2015

ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಿಸಲು ಬಿಜೆಪಿ ಪಣ: ಜಗದೀಶ್ ಶೆಟ್ಟರ್

ಬೆಂಗಳೂರು : ದೇಶಾದ್ಯಂತ ಕಾಂಗ್ರೆಸ್ ಮುಕ್ತವಾಗುತ್ತಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೆದರಿಕೆಯಾಗಿದ್ದು, ರಾಜ್ಯವನ್ನು ಬಿಜೆಪಿ ಮುಕ್ತವನ್ನಾಗಿಸುವ ಭ್ರಮೆಯಲ್ಲಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಟೀಕಿಸಿದ್ದಾರೆ.

ದಾವಣಗೆರೆಯಲ್ಲಿ ನಡೆದ ಸರ್ವೋದಯ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯವನ್ನು ಬಿಜೆಪಿ ಮುಕ್ತಗೊಳಿಸುವುದಾಗಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯಾವುದೇ ಕಾರಣಕ್ಕೂ ಬಿಜೆಪಿ ಶಕ್ತಿಯನ್ನು ಕುಂದಿಸಲು ಸಾಧ್ಯವಿಲ್ಲ. ಈಗಾಗಲೇ ದೇಶದಲ್ಲೆಡೆ ಕಾಂಗ್ರೆಸ್ ಮುಕ್ತವಾಗುತ್ತಿದೆ. ಕರ್ನಾಟಕದಲ್ಲೂ ಕಾಂಗ್ರೆಸ್ ಮುಕ್ತಗೊಳಿಸಲು ಬಿಜೆಪಿ ಪಣತೊಟ್ಟಿದೆ ಎಂದರು.

ಎರಡು ವರ್ಷಗಳ ರಾಜ್ಯ ಸರ್ಕಾರದ ನಿಷ್ಕ್ರಿಯ ಆಡಳಿತ, ಭ್ರಷ್ಟಾಚಾರದ ಬಗ್ಗೆ ಜನ ರೋಸಿಹೋಗಿದ್ದು, ಕಾಂಗ್ರೆಸ್‌ನಿಂದ ದೂರ ಸರಿಯುತ್ತಿದ್ದಾರೆ. ಇದರಿಂದ ಮುಖ್ಯಮಂತ್ರಿಗೆ ಬಿಜೆಪಿ ಕಂಡರೆ ಭಯ ಉಂಟಾಗಿದೆ. ರಾಜ್ಯ ಮತ್ತು ರಾಷ್ಟ್ರದಲ್ಲಿ ಕಾಂಗ್ರೆಸ್ ಮುಕ್ತಗೊಳಿಸುವುದು ಬಿಜೆಪಿ ಸಂಕಲ್ಪ ಎಂದು ಹೇಳಿದರು.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿಗಳ ಬಿಜೆಪಿ ಮುಕ್ತ ಕರ್ನಾಟಕದ ಹೇಳಿಕೆಗೆ ಉತ್ತರ ಸಿಗಲಿದೆ. ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited