ನವದೆಹಲಿ : ಎನ್.ಡಿ.ಎ ನೇತೃತ್ವದ ಕೇಂದ್ರ ಸರ್ಕಾರ ಒಂದು ವರ್ಷದ ಅಧಿಕಾರಾವಧಿ ಪೂರೈಸಿದೆ. ಈ ನಿಟ್ಟಿನಲ್ಲಿ ತೆರಿಗೆ ಹೊರೆಯನ್ನು ಮತ್ತಷ್ಟು ಇಳಿಸಿ, ಭಾರತದಲ್ಲಿ ಇನ್ನಷ್ಟು ಉದ್ಯಮಗಳಿಗೆ ಅವಕಾಶ ನೀಡುವ ಮೂಲಕ ಉದ್ಯಮಸ್ನೇಹಿ ಭಾರತವನ್ನಾಗಿ ಮಾಡುವ ಪ್ರಮುಖ ಗುರಿ ಹೊಂದಲಾಗಿದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.
ಹಲವಾರು ಗೊಂದಲಗಳ ನಡುವೆಯೇ ಆರ್ಥಿಕ ಸುಧಾರಣೆ ಮತ್ತಷ್ಟು ವೇಗಗೊಳಿಸಿ, ದೇಶದಲ್ಲಿ ಉದ್ಯಮಿಗಳಿಗೆ ಅನುಕೂಲವಾದ ವಾತಾವರಣ ಕಲ್ಪಿಸಿಕೊಡುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಕೇಂದ್ರ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹೇಳಿದ್ದಾರೆ
ಕಾರ್ಪೋರೇಟ್ ವಲಯ ಆಡಳಿತಾರೂಢ ಬಿಜೆಪಿ ಸರ್ಕಾರ ಉದ್ಯಮಿಗಳಿಗೆ ಅನುಕೂಲಕರ ವಾತಾವರಣ ಕಲ್ಪಿಸುತ್ತಿಲ್ಲ ಎಂದು ಅಸಮಾಧಾನವ್ಯಕ್ತಪಡಿಸಿವೆ. ಆದರೆ ಕಾರ್ಪೋರೇಟ್ ವಲಯದ ಈ ಆರೋಪದಲ್ಲಿ ಯಾವುದೇ ಸತ್ಯಾಂಶವಿಲ್ಲ. ಲಾಭದ ಹುನ್ನಾರ ಹೊಂದಿರುವ ಕೆಲವು ಪೂರ್ವಾಗ್ರಹಪೀಡಿತ ಕಂಪನಿಗಳು ಈ ರೀತಿ ಅಪಪ್ರಚಾರ ಮಾಡುತ್ತಿವೆ ಎಂದು ಜೇಟ್ಲಿ ದೂರಿದ್ದಾರೆ.