Untitled Document
Sign Up | Login    
Dynamic website and Portals
  
May 20, 2015

ನಜೀಬ್ ಜಂಗ್ ಮೂಲಕ ಕೇಂದ್ರ ದೆಹಲಿ ಆಡಳಿತ ನಡೆಸಲು ಯತ್ನಿಸುತ್ತಿದೆ: ಕೇಜ್ರಿವಾಲ್

ಅರವಿಂದ್ ಕೇಜ್ರಿವಾಲ್ ಅರವಿಂದ್ ಕೇಜ್ರಿವಾಲ್

ನವದೆಹಲಿ : ದೆಹಲಿ ಸರ್ಕಾರದ ಮುಖ್ಯಕಾರ್ಯದರ್ಶಿ ನೇಮಕದ ಕುರಿತಂತೆ ಉಪರಾಜ್ಯಪಾಲ ನಜೀಬ್ ಜಂಗ್ ಅವರ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಮೂಲಕ ದೆಹಲಿ ಆಡಳಿತ ನಡೆಸಲು ಯತ್ನಿಸುತ್ತಿದೆ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.

ಸಂವಿಧಾನಾತ್ಮಕವಾಗಿ ದೆಹಲಿ ಸರ್ಕಾರ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಡಿ ಎಂದು ಕೇಜ್ರಿವಾಲ್ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.

ದೆಹಲಿ ಉಪರಾಜ್ಯಪಾಲ ನಜೀಬ್ ಜಂಗ್ ಅವರು ಶಕುಂತಲಾ ಗ್ಯಾಮ್ಲಿನ್ ಅವರನ್ನು ಹಂಗಾಮಿ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದ್ದರು. ಇದು ಮುಖ್ಯಮಂತ್ರಿ ಕೇಜ್ರಿವಾಲ್ ಮತ್ತು ಜಂಗ್ ನಡುವೆ ಜಂಗೀಕುಸ್ತಿಗೆ ಕಾರಣವಾಗಿತ್ತು.

ಏತನ್ಮಧ್ಯೆ ಮುಖ್ಯ ಕಾರ್ಯದರ್ಶಿ ನೇಮಕ ಮಾಡಲು ಉಪರಾಜ್ಯಪಾಲರಿಗೆ ಹಕ್ಕಿಲ್ಲ ಎಂದು ಕೆಲವು ಕಾನೂನು, ಸಂವಿಧಾನ ತಜ್ಞರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited