Untitled Document
Sign Up | Login    
Dynamic website and Portals
  
May 23, 2015

ತಮಿಳುನಾಡು ಸಿಎಂ ಆಗಿ ಇಂದು ಜಯಲಲಿತಾ ಪಟ್ಟಾಭಿಷೇಕ

ಜಯಲಲಿತಾ ಜಯಲಲಿತಾ

ಚೆನ್ನೈ : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಣ್ಣಾಡಿಎಂಕೆ ಪ್ರಧಾನ ಕಾರ್ಯದರ್ಶಿ ಜೆ. ಜಯಲಲಿತಾ ಅವರು ನಿರೀಕ್ಷೆಯಂತೆ ಬೆಳಗ್ಗೆ 11 ಗಂಟೆಗೆ ಮದ್ರಾಸ್‌ ವಿವಿ ಕ್ಯಾಂಪಸ್‌ ನಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಜಯಾ ಅವರ ಜೊತೆಗೆ 28 ಸಚಿವರೂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ನಿಂದ ಖುಲಾಸೆಯಾದ ಹಿನ್ನೆಲೆಯಲ್ಲಿ ಜಯಲಲಿತಾ ಅವರನ್ನು ಅಣ್ಣಾಡಿಎಂಕೆ ಶಾಸಕಾಂಗ ಪಕ್ಷದ ನಾಯಕಿಯನ್ನಾಗಿ ಶುಕ್ರವಾರ ಪಕ್ಷದ ಶಾಸಕಾಂಗ ಸಭೆಯು ಆಯ್ಕೆ ಮಾಡಿತು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಒ.ಪನ್ನೀರಸೆಲ್ವಂ ಅವರು ರಾಜ್ಯಪಾಲ ಕೆ.ರೋಸಯ್ಯ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದರು.

ಬಳಿಕ ರಾಜ್ಯಪಾಲರನ್ನು ಭೇಟಿ ಮಾಡಿದ ಜಯಲಲಿತಾ ಅವರು ಅಧಿಕಾರ ರಚನೆಯ ಔಪಚಾರಿಕ ಹಕ್ಕು ಮಂಡಿಸಿದರು. ಇದಾದ ಕೆಲವೇ ಹೊತ್ತಿನಲ್ಲಿ ಪ್ರಕಟಣೆ ಹೊರಡಿಸಿದ ರಾಜಭವನ, ’ಜಯಾ ಅವರು ತಮಿಳುನಾಡಿನ ಹೊಸ ಮುಖ್ಯಮಂತ್ರಿಯಾಗಲಿದ್ದಾರೆ. ಹಾಲಿ ಮುಖ್ಯಮಂತ್ರಿ ಒ.ಪನ್ನೀರಸೆಲ್ವಂ ರಾಜೀನಾಮೆಯನ್ನು ಅಂಗೀಕರಿಸಲಾಗಿದ್ದು, ಪರ್ಯಾಯ ವ್ಯವಸ್ಥೆಯಾಗುವ ತನಕ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ' ಎಂದು ತಿಳಿಸಿದೆ.

ಶಾಸಕಾಂಗ ಸಭೆಯಲ್ಲಿ ಜಯಾ ಅವರ ಹೆಸರನ್ನು ನಿರ್ಗಮಿತ ಮುಖ್ಯಮಂತ್ರಿ ಒ.ಪನ್ನೀರಸೆಲ್ವಂ ಸೂಚಿಸುತ್ತಿದ್ದಂತೆಯೇ ಶಾಸಕರಲ್ಲಿ ಹರ್ಷದ ಹೊನಲು ಹರಿಯಿತು. ಅಣ್ಣಾಡಿಎಂಕೆ ಕಾರ್ಯಕರ್ತರು ಕುಣಿದು ಕುಪ್ಪಳಿಸಿದರು.

ಜಯಾ ಅವರು ಮತ್ತೆ ಸಿಎಂ ಆಗಲಿದ್ದಾರೆ ಎಂದು ಸುದ್ದಿಗಾರರಿಗೆ ತಿಳಿಸಿದ ಅವರ ಪಟ್ಟ ಶಿಷ್ಯ ಪನ್ನೀರಸೆಲ್ವಂ, 'ಜಯಾ ಈಗ ಬೆಂಕಿಯಲ್ಲಿ ಶುದ್ಧೀಕರಿಸಿದ ಚಿನ್ನ' ಎಂದು ಕೊಂಡಾಡಿದರು.'ಅಮ್ಮನವರು ಅಣ್ಣಾಡಿಎಂಕೆಯ ಶಾಶ್ವತ ಪ್ರಧಾನ ಕಾರ್ಯದರ್ಶಿ' ಎಂದು ಹೊಗಳಿಕೆಯ ಮಳೆಗರೆದರು. ನಂತರ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಪತ್ರವಿತ್ತರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited