ವಿಜಯಪುರ : ಬಿಜೆಪಿ ಮುಕ್ತ ರಾಜ್ಯ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಾಧ್ಯವಿಲ್ಲ, ಅವರು ಕಾಂಗ್ರೆಸ್ ಮುಕ್ತ ರಾಜ್ಯವನ್ನಾಗಿ ಮಾಡುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ರಾಜ್ಯ ಸರ್ಕಾರ ಎಲ್ಲಾ ರಂಗಗಳಲ್ಲಿಯೂ ವಿಫಲವಾಗಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಪೊಲೀಸರು ಭ್ರಷ್ಟರಾಗಿದ್ದಾರೆ ಎಂದು ದೂರಿದರು.
ಸಚಿವರು ಮತ್ತು ಸಿಎಂ ಸಿದ್ದರಾಮಯ್ಯ ನಡುವೆ ಸಾಮರಸ್ಯವಿಲ್ಲದಂತಾಗಿದೆ. ಅಲ್ಲದೇ ಕಾಂಗ್ರೆಸ್ ಸರ್ಕಾರದಲ್ಲಿ ಬಿಜೆಪಿ ಜಾರಿಗೊಳಿಸಿದ್ದ ಅಭಿವೃದ್ಧಿ ಕಾರ್ಯ ಕುಂಠಿತವಾಗಿವೆ ಎಂದು ವಾಗ್ದಾಳಿ ನಡೆಸಿದರು. ಅಲ್ಲದೇ ಸರ್ಕಾರ ಎಷ್ಟು ನಿರಾವರಿ ಯೋಜನೆ ಅನುಷ್ಠಾನ ಮಾಡಿದೆ? ಎಷ್ಟು ಯೋಜನೆಗಳಿಗೆ ಹೂಡಿಕೆ ಮಾಡಿದೆ ಮಾಹಿತಿ ನೀಡಲಿ ಎಂದು ಸವಾಲು ಹಾಕಿದರು.