ನವದೆಹಲಿ : ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವುದು ಮತ್ತು ಸಂವಿಧಾನದ 370ನೇ ಪರಿಚ್ಚೇದ ರದ್ದು ಮಾಡುವುದಕ್ಕಿಂತ ಮುಖ್ಯವಾಗಿ ದೇಶದ ಅಭಿವೃದ್ಧಿ ಮಾಡುವುದೇ ಕೇಂದ್ರ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಎನ್ ಡಿಎ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮ ಮಂದಿರ ನಿರ್ಮಾಣ, 370ನೇ ಪರಿಚ್ಚೇದ ರದ್ದು ಎರಡೂ ವಿಷಯಗಳೂ ತುಂಬಾ ಮುಖ್ಯವಾದದ್ದು ಆದರೆ ಸದ್ಯದ ಸಮಯದಲ್ಲಿ ನಮ್ಮ ಸರ್ಕಾರದ ಮೊದಲ ಆದ್ಯತೆ ಅಭಿವೃದ್ಧಿಗೆ ಎಂದು ಸ್ಪಷ್ಟಪಡಿಸಿದರು.
ರಾಮ ಮಂದಿರ ವಿಷಯ ನ್ಯಾಯಾಲದಲ್ಲಿದೆ. ಈ ಪ್ರಕರಣದ ಕುರಿತು ಹೈಕೋರ್ಟ್ ನೀಡಿರುವ ತೀರ್ಪಿನ ಮೇಲ್ಮನವಿ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿದೆ. ಹಾಗಾಗಿ ಅದರ ತೀರ್ಪಿಗಾಗಿ ಕಾಯುತ್ತಿದ್ದೇವೆ ಎಂದರು.