ನವದೆಹಲಿ : ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳ ಪೈಕಿ ಭಾರತ ಮುಂಚೂಣಿಯಲ್ಲಿದ್ದು, ಅಭಿವೃದ್ಧಿ ಹೊಂದಿರುವ ದೇಶಗಳಂತೆ ಭಾರತದಲ್ಲೂ ಪ್ಲಾಸ್ಟಿಕ್ ನೋಟುಗಳನ್ನು ಜಾರಿಗೆ ತರುವ ಅಗತ್ಯವಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಮೇಕ್ ಇನ್ ಇಂಡಿಯಾದ ಬಗ್ಗೆ ನಡೆದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹೋಶಂಗಾಬಾದ್ ಹಾಗೂ ಮೈಸೂರಿನಲ್ಲಿ ನೋಟುಗಳನ್ನು ಮುಂದ್ರಣ ಮಾಡುವ ಆರಂಭಿಸುವ ಮೂಲಕ ಭಾರತ ಸ್ವಾವಲಂಭನನೆಯ ಮೊದಲ ಹೆಜ್ಜೆ ಇರಿಸಿದ್ದಾಗಿದೆ. ದೇಶದಲ್ಲಿ ಪ್ಲಾಸ್ಟಿಕ್ ಕರೆನ್ಸಿ ಜಾರಿಗೆ ತರುವ ಇರಾದೆಯಿದೆ ಎಂದು ಹೇಳಿದರು.
ಇದೇ ವೇಳೆ ದೇಶದ ಎಲ್ಲಾ ಶಾಲೆಗಳಲ್ಲೂ ಜೂನ್ ಅಂತ್ಯದೊಳಗೆ ಶೌಚಾಲ ನಿರ್ಮಾಣ ಕಡ್ಡಾಯ ಮಾಡಲಾಗುವುದು. ಸ್ವಚ್ಛ ಭಾರತ ಅಭಿಯಾನದಡಿ ಈ ಯೋಜನೆ ಜಾರಿಗೆ ತರಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.