ನವದೆಹಲಿ : ಒಂದಿಲ್ಲೊಂದು ವಿವಾದಿತ ಹೇಳಿಕೆ ನೀಡಿ ಸುದ್ದಿಯಲ್ಲಿರುವ ಉನ್ನಾವ್ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಇದೀಗ ರಾಮ ಮಂದಿರ ನಿರ್ಮಾಣದ ಕುರಿತಾಗಿ ಇನ್ನೊಂದು ಹೇಳಿಕೆ ನೀಡಿ ಸುದ್ದಿಯಾಗಿದ್ದಾರೆ.
ರಾಮ ಮಂದಿರ ನಿರ್ಮಾಣ ವಿಚಾರದಲ್ಲಿ ಬಿಜೆಪಿಯ ಮೇಲೆ ಯಾರೂ ಶಂಕೆ ವ್ಯಕ್ತಪಡಿಸುವ ಅಗತ್ಯವಿಲ್ಲ. ನಮ್ಮ ಸರ್ಕಾರದ ಅಧಿಕಾರವಧಿಯಲ್ಲೇ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಮಾಡುತ್ತೇವೆ ಎಂದು ಹೇಳಿದ್ದಾರೆ.
'ಇಂದು ಅಲ್ಲದಿದ್ದರೆ ನಾಳೆ, ನಾಳೆ ಅಲ್ಲದಿದ್ದರೆ ನಾಡಿದ್ದು. ಒಟ್ಟಿನಲ್ಲಿ ರಾಮ ಮಂದಿರ ನಿರ್ಮಾಣ ಮಾಡುವುದು ಶತ ಸಿದ್ದ, ನಾವು ಅಧಿಕಾರಕ್ಕೆ ಬಂದು ಒಂದು ವರ್ಷ ಮಾತ್ರ ಆಗಿದೆ, ಇನ್ನೂ ನಾಲ್ಕು ವರ್ಷ ಅಧಿಕಾರಾವಧಿ ಇದೆ' ಎಂದು ತಿಳಿಸಿದ್ದಾರೆ.