ಮುಂಬೈ : ಅಶೋಬಾ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದ ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಂಬೈನಿಂದ 570 ಕಿ.ಮೀ ದೂರದಲ್ಲಿ ಚಂಡಮಾರುತ ಕಾಣಿಸಿ ಕೊಂಡಿದ್ದು, ಇದು ದಿನ ಕಳೆದಂತೆ ಹೆಚ್ಚು ತೀವ್ರವಾಗುತ್ತಿದೆ.
ಪರಿಣಾಮ ಈಗಾಗಲೇ ಮಂಗಳೂರಿನಲ್ಲಿ 8 ಸೆಂ.ಮೀ ಮಳೆಯಾಗಿದ್ದು, ಅದೇ ರೀತಿ ಕರಾವಳಿ ಭಾಗದಲ್ಲಿ ಮಳೆ ಮುಂದುವರಿಯಲಿದೆ. ಮಂಗಳೂರು, ಉಡುಪಿಯಲ್ಲಿ ತಲಾ 8 ಸೆಂ.ಮೀ ಮಳೆಯಾಗಿದ್ದರೆ, ಉಡುಪಿಯಲ್ಲಿ ತಲಾ 8ಸೆ.ಮೀ. ಮಳೆಯಾಗಿದ್ದರೆ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ತಲಾ 6 ಸೆ.ಮೀ ಮಳೆಯಾಗಿದೆ.
ಈ ಮಧ್ಯೆ ನಿಧಾನಗತಿಯಲ್ಲಿ ಆಗಮಿಸುತ್ತಿರುವ ಮುಂಗಾರು ಕೇರಳ ರಾಜ್ಯವನ್ನು ಸಂಪೂರ್ಣ ಆವರಿಸಿದ್ದು, ಕರಾವಳಿಯನ್ನು ಬಹುತೇಕ ಸುತ್ತುವರಿದಿದೆ. ಇದರೊಂದಿಗೆ ಮೈಸೂರು, ಮಂಡ್ಯ ಸೇರಿದಂತೆ ರಾಜ್ಯದ ಹಲವೆಡೆಗಳಲ್ಲಿ ಸಾಧಾರಣ ಮಳೆ ತರುವ ಮೂಲಕ ಮುಂಗಾರು ರಾಜ್ಯದಲ್ಲಿ ತನ್ನ ಪ್ರಭಾವನ್ನು ವಿಸ್ತರಿಸುತ್ತಿದೆ ಎಂದು ಹವಾಮಾನ ಇಲಾಖೆಯ ಪ್ರಭಾರ ನಿರ್ದೇಶಕ ಸುಂದರ್ ಎಂ.ಮೇತ್ರಿ ಹೇಳಿದ್ದಾರೆ.