ನವದೆಹಲಿ : ನಕಲಿ ಕಾನೂನು ಪದವಿ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಡಿಸಿಎಂ ಮನೀಶ್ ಸಿಸೋಡಿಯಾ, ಲೆಫ್ಟಿನೆಂಟ್ ಗವರ್ನರ್ ಅವರನ್ನು ಭೇಟಿಯಾಗಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಲೆ.ಗವರ್ನರ್ ನಜೀಬ್ ಜಂಗ್ ಅವರನ್ನು ಭೇಟಿಯಾಗಿ ಜಿತೇಂದ್ರ ಸಿಂಗ್ ತೋಮರ್ ಅವರ ರಾಜೀನಾಮೆ ಪತ್ರವನ್ನು ನೀಡಲಿದ್ದಾರೆ. ಅಲ್ಲದೇ ದೆಹಲಿ ನೂತನ ಕಾನೂನು ಸಚಿವರಾಗಿ ಅಲಕಾ ಲಂಬಾ ನೇಮಕವಾಗುವ ಸಾಧ್ಯತೆಯಿದೆ.
ಅಲಕಾ ಲಂಬಾ ಚಾಂದಿನಿ ಚೌಕ್ ನ ಶಾಸಕಿಯಾಗಿದ್ದು, ಅವರನ್ನು ಕಾನೂನು ಸಚವರನ್ನಾಗಿ ನೇಮಕ ಮಾಡುವ ಕುರಿತು ಲೆ.ಗವರ್ನರ್ ಜತೆ ಕೂಡ ಚರ್ಚೆ ನಡೆಸಲಿದ್ದಾರೆ.
ಇನ್ನು ತೋಮರ್ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನೇತೃತ್ವದಲ್ಲಿ ಆಪ್ ನಾಯಕರ ಸಭೆ ಆರಂಭವಾಗಿದೆ.
ನಕಲಿ ಕಾನೂನು ಪದವಿ ಹಿನ್ನಲೆಯಲ್ಲಿ ಬಂಧನಕ್ಕೆ ಗುರಿಯಾಗಿದ್ದ ಆಮ್ ಆದ್ಮಿ ಸರಕಾರದ ಕಾನೂನು ಸಚಿವ ಜೀತೇಂದರ್ ಸಿಂಗ್ ತೋಮರ್ ಗೆ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಯನ್ನು ವಿಧಿಸಿ ಫೈಜಾಬಾದ್ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಹಿನ್ನಲೆಯಲ್ಲಿ ತೋಮರ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು