ನವದೆಹಲಿ : ವರ್ಷಾಂತ್ಯದಲ್ಲಿ ಬಿಹಾರ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಹಿಂದುಸ್ಥಾನೀ ಆವಾಮ್ ಮೋರ್ಚಾ ನಾಯಕನಾಗಿರುವ ಬಿಹಾರದ ಮಾಜಿ ಮುಖ್ಯಮಂತ್ರಿ ಜೀತನ್ ರಾಮ್ ಮಾಂಝಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ.
ಉಭಯ ನಾಯಕರ ಈ ಭೇಟಿ ಬಿಹಾರ ವಿಧಾನಸಭಾ ಚುನಾವಣೆಗಾಗಿ ಮಾಂಝಿ ಅವರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಊಹಾಪೋಹಗಳು ಹೆಚ್ಚಾಗಿವೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ 50 ಸ್ಥಾನಗಳನ್ನು ಬಿಟ್ಟುಕೊಟ್ಟಲ್ಲಿ ತಾನು ಎನ್.ಡಿ.ಎ ಕೂಟವನ್ನು ಸೇರುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ ಬಿಜೆಪಿ, ಮಾಂಝಿಗೆ ಕೇವಲ 30 ಸೀಟುಗಳನ್ನು ನೀಡಲು ಮುಂದೆ ಬರಬಹುದೆಂದು ಹೇಳಲಾಗುತ್ತಿದೆ.
ಈ ನಡುವೆ ಎದ್ದಿರುವ ಇನ್ನೊಂದು ಊಹಾಪೋಹದ ಪ್ರಕಾರ ಪದಚ್ಯುತ ಆರ್.ಜೆ.ಡಿ ನಾಯಕ ಹಾಗೂ ಮಾಧೇಪುರ ಸಂಸದರಾಗಿರುವ ರಾಜೇಶ್ ರಂಜನ್ ಅಲಿಯಾಸ್ ಪಪ್ಪು ಯಾದವ್ ಅವರು ಕೂಡ ಬಿಜೆಪಿಯೊಂದಿಗೆ ಮೈತ್ರಿಯನ್ನು ಅಪೇಕ್ಷಿಸಿರುವುದಾಗಿ ತಿಳಿದು ಬಂದಿದೆ.