ನವದೆಹಲಿ : ಉನ್ನತ ಶೈಕ್ಷಣಿಕ ಸಂಸ್ಥೆಗಳಲ್ಲಿ ಗುಣಮಟ್ಟವಿರುವ ಶಿಕ್ಷಕರು ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಕೊರತೆ ಇದ್ದು, ಇದು ನಮ್ಮ ದೇಶಕ್ಕೆ ದೊಡ್ಡ ಸವಾಲಾಗಿದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆತಂಕ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ಒಂದು ವಾರಗಳ ಕಾಲ ನಡೆಯುತ್ತಿರುವ ಇನ್ ರೆಸಿಡೆನ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಕೇಂದ್ರ ವಿಶ್ವವಿದ್ಯಾಲಯಗಳ 31 ಶಿಕ್ಷಕರನ್ನು ಭೇಟಿ ಮಾಡಿ ಮಾತನಾಡಿದ ಅವರು, ಶಿಕ್ಷಕರು ತಮ್ಮ ಜ್ಞಾನ ಮತ್ತು ಕೌಶಲ್ಯವನ್ನು ವೃದ್ಧಿಸಿಕೊಳ್ಳಬೇಕು. ಇಲ್ಲವಾದಲ್ಲಿ ನಮ್ಮ ದೇಶದ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ದುಡಿಯುವ ಶಿಕ್ಷಕರ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಒಬ್ಬ ಪ್ರೇರಣೆ ನೀಡುವ ಶಿಕ್ಷಕ ವಿದ್ಯಾರ್ಥಿಯ ವೈಯಕ್ತಿಕ ಗುರಿಯನ್ನು ಸಾಮಾಜಿಕ ಮತ್ತು ರಾಷ್ಟ್ರೀಯ ಗುರಿಗಳಿಗೆ ಸಂಪರ್ಕಿಸುತ್ತಾರೆ. ಹೀಗೆ ಪ್ರೇರಣೆ ನೀಡುವ ಶಿಕ್ಷಕರನ್ನು ಗುರುತಿಸಿ ಪ್ರೋತ್ಸಾಹಿಸಬೇಕು.ಇದರಿಂದ ಶಿಕ್ಷಕರಿಗೂ ಪ್ರೋತ್ಸಾಹ ಸಿಕ್ಕಂತಾಗುತ್ತದೆ ಎಂದು ಹೇಳಿದರು.