Untitled Document
Sign Up | Login    
Dynamic website and Portals
  
June 16, 2015

ಜೂ.19ರಂದು ಬಿಜೆಪಿಯ ಮಹತ್ವದ ಸಭೆ

ಬೆಂಗಳೂರು : ಬಿಬಿಎಂಪಿ ಚುನಾವಣೆ ಸಿದ್ಧತೆ, ಅಂತಾರಾಷ್ಟ್ರೀಯ ಯೋಗ ದಿನ ಯಶಸ್ವಿಗೊಳಿಸುವುದು, ಪಕ್ಷ ಸಂಘಟನೆ ಸೇರಿದಂತೆ ಪ್ರಮುಖ ವಿದ್ಯಮಾನಗಳ ಬಗ್ಗೆ ಚರ್ಚಿಸಲು ಬಿಜೆಪಿ ಜೂ.19ರಂದು ಮಹತ್ವದ ಸಭೆ ಕರೆದಿದೆ.

ಬೆಂಗಳೂರಿನಲ್ಲಿರುವ ಪಕ್ಷದ ಕಚೇರಿಯಲ್ಲಿ ಅಂದು ದಿನಪೂರ್ತಿ ಸಭೆ ನಡೆಯಲಿದೆ.
ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ಅನಂತ್‌ ಕುಮಾರ್, ಜಿ.ಎಂ.ಸಿದ್ದೇಶ್ವರ್, ವೆಂಕಯ್ಯ ನಾಯ್ಡು, ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ್ ಜೋಷಿ, ವಿಧಾನಸಭೆ ಉಭಯ ಸದನಗಳ ಪ್ರತಿಪಕ್ಷದ ನಾಯಕರಾದ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಮುಖಂಡರಾದ ಆರ್.ಅಶೋಕ್ ಸೇರಿದಂತೆ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ಮಾಜಿ ಸಚಿವರು ಹಾಗೂ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

ಸಭೆಗೆ ಎಲ್ಲರೂ ಕಡ್ಡಾಯವಾಗಿ ಹಾಜರಾಗಬೇಕೆಂದು ಈಗಾಗಲೇ ರಾಜ್ಯ ಘಟಕದ ಅಧ್ಯಕ್ಷರಿಂದ ಅಧಿಕೃತ ಸೂಚನೆ ತಲುಪಿಸಲಾಗಿದೆ. ಇದೇ 21ರಂದು ವಿಶ್ವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಸಲಾಗುತ್ತಿದೆ. ರಾಜ್ಯದಲ್ಲೂ ಇದನ್ನು ಯಶಸ್ವಿಯಾಗಿ ನಡೆಸುವಂತೆ ಆರ್‌.ಎಸ್‌.ಎಸ್ ಸೂಚನೆ ಕೊಟ್ಟಿದೆ ಎಂದು ತಿಳಿದುಬಂದಿದೆ. ಇದರ ಜತೆಗೆ ಕೇಂದ್ರ ನಾಯಕರು ಕೂಡ ಕರ್ನಾಟಕದಲ್ಲಿ ಯೋಗ ದಿನಾಚರಣೆಯನ್ನು ಯಶಸ್ವಿಯಾಗಿ ಮುನ್ನಡೆಸಬೇಕು. ಶಾಲಾ-ಕಾಲೇಜುಗಳು, ಧಾರ್ಮಿಕ ಕೇಂದ್ರಗಳು ಮತ್ತಿತರ ಕಡೆ ಇದನ್ನು ಆಚರಿಸುವಂತೆ ಸಲಹೆ ಮಾಡಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು 19ರಂದು ಸಭೆ ನಡೆಸಲಿದ್ದಾರೆ.

ಅಲ್ಲದೇ ಜುಲೈ ತಿಂಗಳ ಅಂತ್ಯಕ್ಕೆ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆ ಹೆಚ್ಚಾಗಿದೆ. ನ್ಯಾಯಾಲಯ ನೀಡುವ ತೀರ್ಪಿನ ಮೇಲೆ ಇದು ಅವಲಂಬಿತವಾಗಿದೆ. ಒಂದು ವೇಳೆ ಚುನಾವಣೆ ನಡೆಸುವಂತೆ ನ್ಯಾಯಾಲಯ ನಿರ್ದೇಶನ ನೀಡಿದರೆ ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆಯೂ ಅಂದು ವಿಸ್ತೃತ ಚರ್ಚೆ ನಡೆಯಲಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited