ನವದೆಹಲಿ : ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಸಂಬಂಧದ ಘಟನೆಗಳು ಶೇ.25ರಷ್ಟು ಇಳಿಮುಖ ವಾಗಿದೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮ್ಮು-ಕಾಶ್ಮೀರದಲ್ಲಿ ಭದ್ರತಾ ವಾತಾವರಣ ಗಣನೀಯವಾಗಿ ಉತ್ತಮಗೊಂಡಿದೆ ಎಂದರು.
ರಾಜ್ಯ ಅಥವಾ ದೇಶದ ಅಭಿವೃದ್ಧಿಗೆ ಬೇಕಿರುವ ಶಾಂತಿಯುತ ಮತ್ತು ಸುರಕ್ಷತಾ ವಾತಾವರಣವನ್ನು ಸೃಷ್ಟಿಸುವತ್ತ ಕೇಂದ್ರ ಸರ್ಕಾರ ಗಮನ ಹರಿಸಿದೆ. ಜಮ್ಮು-ಕಾಶ್ಮೀರದಲ್ಲಿ ಹಿಂಸೆ ಕೂಡ ಗಣನೀಯ ಇಳಿಮುಖ ಕಂಡಿದೆ ಎಂದು ತಿಳಿಸಿದರು.
ಇದೇ ವೇಳೆ ವಿತ್ತ ಸಚಿವ ಅರುಣ್ ಜೇಟ್ಲಿ, ಜಮ್ಮು-ಕಾಶ್ಮೀರದ ಅಭಿವೃದ್ಧಿಗೆ 2437 ಕೋಟಿಯ ವಿಶೇಷ ಪ್ಯಾಕೇಜ್ ಕೂಡ ಘೋಷಿಸಿದ್ದಾರೆ. ಸತತ ಪ್ರವಾಹದಿಂದ ತತ್ತರಿಸಿರುವ ರಾಜ್ಯದ ಜನತೆಯ ಪರಿಹಾರಕ್ಕಾಗಿ ಈ ಸಹಾಯಧನ ಘೋಷಿಸಲಾಗಿದೆ ಎಂದರು.