Untitled Document
Sign Up | Login    
Dynamic website and Portals
  
June 17, 2015

ಆಪ್ ನ 21 ಶಾಸಕರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ

ಅರವಿಂದ್ ಕೇಜ್ರಿವಾಲ್ ಅರವಿಂದ್ ಕೇಜ್ರಿವಾಲ್

ನವದೆಹಲಿ : ದೆಹಲಿಯ ಆಪ್ ನೇತೃತ್ವದ ಸರ್ಕಾರಕ್ಕೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಆಪ್ ನ 21 ಶಾಸಕರ ವಿರುದ್ಧ 24 ಕ್ರಿಮಿನಲ್ ಪ್ರಕರಣಗಳು ಇದ್ದು, ಇದೀಗ ದೆಹಲಿ ಪೊಲೀಸರು ಆಪ್ ಶಾಸಕರ ವಿರುದ್ಧ ಚಾರ್ಜ್ ಶೀಟ್ ಹಾಕಲು ಸಿದ್ಧತೆ ನಡೆಸುತ್ತಿದ್ದಾರೆ.

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಒಟ್ಟು 21 ಆಮ್ ಆದ್ಮಿ ಪಕ್ಷದ ಶಾಸಕರ ವಿರುದ್ಧದ ಪ್ರಕರಣಗಳನ್ನು ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದು, ಶೀಘ್ರದಲ್ಲೇ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಈ ಮೂಲಕ ಆಪ್ ಗೆ ಶಾಕ್ ಕೊಡಲು ಕೇಂದ್ರ ಸರ್ಕಾರ ತಂತ್ರ ಹೆಣೆದಿದೆಯಾ ಎಂಬ ಊಹಾಪೋಹ ಹರಿದಾಡತೊಡಗಿದೆ.

ಎಎಪಿ ವರಿಷ್ಠ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಆರು ಬಾರಿ ಆರೋಪ ಪಟ್ಟಿ ದಾಖಲಿಸಲಾಗಿದೆ. ಅಲ್ಲದೇ ಬೇರೆ ಎರಡು ಪ್ರಕರಣಗಳ ತನಿಖೆ ನಡೆಯುತ್ತಿದೆ. ಪ್ರತಿಭಟನೆ, ನಿಷೇಧದ ಆದೇಶ ಉಲ್ಲಂಘಿಸಿ ಧರಣಿ, ಕರ್ತವ್ಯ ನಿರತ ಅಧಿಕಾರಿಗಳಿಗೆ ಅಡ್ಡಿ ಸೇರಿದಂತೆ ಹಲವು ಪ್ರಕರಣಗಳು ಕೇಜ್ರಿವಾಲ್ ವಿರುದ್ಧ ಇದೆ.

ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ 2014ರ ಜನವರಿ ತಿಂಗಳಿನಲ್ಲಿ ರೈಲ್ವೆ ಭವನ್ ಬಳಿ ನಡೆಸಿದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ನಿಷೇಧಾಜ್ಞೆ ಉಲ್ಲಂಘಿಸಿದ ಕಾಯ್ದೆ ಅಡಿಯಲ್ಲಿ ಸಿಸೋಡಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ದೆಹಲಿ ಮಾಜಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ವಿರುದ್ಧ ಮೋಸ, ವಂಚನೆ ಪ್ರಕರಣ ದಾಖಲಾಗಿದೆ. ಕರೋಲ್ ಭಾಗ್ ಶಾಸಕ ರವಿ ವಿರುದ್ಧ ಪ್ರಾಥಮಿಕ ತನಿಖೆಗೆ ಆದೇಶ ನೀಡಲಾಗಿದೆ. ಎಎಪಿ ಕೊಂಡ್ಲಿ ಶಾಸಕ ಮನೋಜ್ ಕುಮಾರ್ ವಿರುದ್ಧ ಮೋಸ, ವಂಚನೆ ಕೇಸ್. ಉತ್ತಮ್ ನಗರ್ ಶಾಸಕ ನರೇಶ್ ಬಾಲಿಯಾನ್ ವಿರುದ್ಧ ಚುನಾವಣೆ ಸಂದರ್ಭದಲ್ಲಿ ಅಕ್ರಮವಾಗಿ ಮದ್ಯ ಹಂಚಿದ ಆರೋಪ, ತಿಲಕ್ ನಗರ್ ಶಾಸಕ ಜರ್ನೈಲ್ ಸಿಂಗ್ ವಿರುದ್ಧ ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ ನಡೆಸಿದ ಪ್ರಕರಣ. ಮತ್ತೊಬ್ಬ ಮಾಜಿ ಕಾನೂನು ಸಚಿವ ಸೋಮನಾಥ್ ಭಾರ್ತಿ ವಿರುದ್ಧ ಪತ್ನಿಗೆ ಹಿಂಸೆ ನೀಡಿದ್ದ ದೂರು ದಾಖಲಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited