ನವದೆಹಲಿ : ದೇಶದಲ್ಲಿ ಮತ್ತೆ ತುರ್ತು ಪರಿಸ್ಥಿತಿ ಹೇರಿಕೆಯನ್ನು ತಳ್ಳಿಹಾಕಲಾಗುದು ಎಂದು ಬಿಜೆಪಿ ಹಿರಿಯ ಮುಖಂಡ, ಮಾಜಿ ಉಪಪ್ರಧಾನಿ ಅಭಿಪ್ರಾಯಪಟ್ಟಿದ್ದಾರೆ.
1975, ಜೂ.25 ಅಂದಿನ ಪ್ರಧಾನಿ ಇಂದಿರಾ ಗಾಂಧಿ ದೇಶದಲ್ಲಿ ತುರ್ತುಪರಿಸ್ಥಿತಿ ಹೇರಿದ್ದರು. ಈ ನಿಟ್ಟಿನಲ್ಲಿ 40 ವರ್ಷ ತುಂಬುತ್ತಿರುವ ಹಿನ್ನಲೆಯಲ್ಲಿ ಹಳೆ ನೆನಪುಗಳನ್ನು ಮೆಲುಕುಹಾಕುತ್ತಾ ಆಂಗ್ಲ ದೈನಿಕವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಭವಿಷ್ಯದಲ್ಲಿ ಮತ್ತೆ ದೇಶದಲ್ಲಿ ತುರ್ತು ಪರಿಸ್ಥಿತಿ ಬರುತ್ತದೆ ಎಂಬುದನ್ನು ತಳ್ಳಿಹಾಕಲಾಗಲ್ಲ ಎಂದರು.
ಮುಂದೆ ಹೀಗೆ ಇರುತ್ತೆ ಎಂದು ನಿಖರವಾಗಿ ಹೇಳಲಾಗದು. ಏಕೆಂದರೆ ಭಾರತದಲ್ಲಿ ದೇಶ ವಿರೋಧಿ ಸಂಘಟನೆಗಳು ಬೆಳೆಯುತ್ತಿವೆ. ಇದರಿಂದಾಗಿ ಪ್ರಜಾಪ್ರಭುತ್ವಕ್ಕೆ ಧಕ್ಕೆಯುಂಟಾಗುತ್ತಿದೆ ಎಂದರು.
ದೇಶದಲ್ಲಿ 1975-77ರವರೆಗೆ ತುರ್ತು ಪರಿಸ್ಥಿತಿ ಹೇರಲಾಗಿತ್ತು. ಹಾಗಂತ ನಾಗರಿಕರ ಮೂಲಭೂತ ಹಕ್ಕುಗಳನ್ನು ಮತ್ತೆ ಕಸಿಯಲ್ಲ ಎಂಬ ನಂಬಿಕೆ ಇಲ್ಲ. ನಿಜಕ್ಕೂ ಇದನ್ನು ತುಂಬಾ ಸುಲಭವಾಗಿ ಮಾಡಲು ಸಾಧ್ಯವಿಲ್ಲ. ನ್ಯಾಯಾಂಗ ಎಲ್ಲಕ್ಕಿಂತ ಹೆಚ್ಚು ಜವಾಬ್ದಾರಿಯುತವಾದದ್ದು, ಆದರೆ ಈ ಪರಿಸ್ಥಿತಿ ಮತ್ತೆ ಪುನರಾವರ್ತನೆಯಾಗಲ್ಲ ಎಂದು ಹೇಳಲ್ಲ. ಕೆಲವು ಶಕ್ತಿಗಳು ಪ್ರಜಾಪ್ರಭುತ್ವದ ಶಕ್ತಿ ಕುಂದಿಸಿ, ತುರ್ತು ಪರಿಸ್ಥಿತಿ ಬರಲ್ಲ ಎಂಬುದನ್ನು ತಳ್ಳಿಹಾಕಲು ಸಾಧ್ಯವಿಲ್ಲ ಎಂಬುದಾಗಿ ಕಳವಳ ವ್ಯಕ್ತಪಡಿಸಿದ್ದಾರೆ.
ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವೇ ಅಧಿಕಾರದಲ್ಲಿ ಇರುವ ಸಂದರ್ಭದಲ್ಲಿಯೇ ಅಡ್ವಾಣಿ ಈ ಹೇಳಿಕೆ ನೀಡಿರುವುದು ಗಮನಾರ್ಹ.