Untitled Document
Sign Up | Login    
Dynamic website and Portals
  
June 22, 2015

ಪತ್ರಕರ್ತನ ದಹನ ಪ್ರಕರಣ: ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್

ನವದೆಹಲಿ : ಶಹಜಹಾನ್ ಪುರ್ ಮೂಲದ ಪತ್ರಕರ್ತ ಜಗೇಂದ್ರ ಸಿಂಗ್ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಹಾಗೂ ಅಖಿಲೇಶ್ ಯಾದವ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಪತ್ರಕರ್ತ ಸಿಂಗ್ ಹತ್ಯೆ ಪ್ರಕರಣದ ಬಗ್ಗೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ ರಜಾಕಾಲ ಪೀಠದ ಜಸ್ಟೀಸ್ ಎಂ.ವೈ.ಇಕ್ಬಾಲ್, ಕೇಂದ್ರ ಸರ್ಕಾರ ಮತ್ತು ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣವನ್ನು ಸಿಬಿಐಗೆ ಯಾಕೆ ವಹಿಸಿಲ್ಲ ಎಂದು ನ್ಯಾಯಾಲಯ ಪ್ರಶ್ನಿಸಿದ್ದು, ಉತ್ತರ ನೀಡಲು 2 ವಾರಗಳ ಗಡುವು ನೀಡಿದೆ.

ಜಗೇಂದ್ರ ಸಿಂಗ್ ಅವರನ್ನು ಬೆಂಕಿ ಹಚ್ಚಿ ಹತ್ಯೆಗೈಯಲಾಗಿದೆ. ಆ ನೆಲೆಯಲ್ಲಿ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸುವಂತೆ ಕೋರ್ಟ್ ನಿರ್ದೇಶನ ನೀಡಬೇಕೆಂದು ಪಿಐಎಲ್ ಸಲ್ಲಿಸಿದ್ದ ಡಿಎಸ್ ಜೈನ್ ಮನವಿ ಮಾಡಿಕೊಂಡಿದ್ದರು. ಈ ನಿಟ್ಟಿನಲ್ಲಿ ಹಿರಿಯ ವಕೀಲ ಅದೀಶ್ ಸಿ ಅಗರ್ ವಾಲ್, ಪ್ರಕರಣವನ್ನು ಸಿಬಿಐಗೆ ಒಪ್ಪಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರ್ಟ್ ಗೆ ಮನವಿ ಮಾಡಿಕೊಂಡಿದ್ದರು.

ಜೂನ್ 1ರಂದು ಶಹಜಹಾನ್ ಪುರ್ ನ ಸಾದಾರ್ ಬಜಾರ್ ನಲ್ಲಿದ್ದ ಸಿಂಗ್ ಮನೆಗೆ ದಾಳಿ ನಡೆಸಿದ್ದ ದುಷ್ಕರ್ಮಿಗಳು ಪತ್ರಕರ್ತ ಸಿಂಗ್ ಅವರನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸಜೀವ ದಹನ ಮಾಡಿದ್ದರು. ಬಳಿಕ ಲಕ್ನೋ ಆಸ್ಪತ್ರೆಯಲ್ಲಿ ಸಿಂಗ್ ಜೂನ್ 8ರಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited