Untitled Document
Sign Up | Login    
Dynamic website and Portals
  
June 23, 2015

ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ರಾಜ್ಯ ಸರ್ಕಾರದಿಂದ ಸುಪ್ರೀಂಗೆ ಮೇಲ್ಮನವಿ

ತಮಿಳುನಾಡು ಸಿಎಂ ಜಯಲಲಿತಾ ತಮಿಳುನಾಡು ಸಿಎಂ ಜಯಲಲಿತಾ

ನವದೆಹಲಿ : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನಿಂದ ಕ್ಲೀನ್‌ಚಿಟ್ ಪಡೆದು ಮತ್ತೆ ತಮಿಳುನಾಡು ಮುಖ್ಯಮಂತ್ರಿಯಾಗಿರುವ ಜೆ.ಜಯಲಲಿತಾ ಅವರ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಸಿದೆ.

ಮೇ 13ರಂದು ಜಯಲಲಿತಾ ನಿರ್ದೋಷಿ ಎಂದು ಹೈಕೋರ್ಟ್ ತೀರ್ಪು ನೀಡಿತ್ತು. ಈ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ, ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ.

ಸರ್ಕಾರದ ವಿಶೇಷ ಅಭಿಯೋಜಕ ಬಿ.ವಿ.ಆಚಾರ್ಯ ಅವರು 2700 ಪುಟಗಳ ಮೇಲ್ಮನವಿ ಸಿದ್ಧಪಡಿಸಿದ್ದು, ಅದನ್ನು ಅವರ ಸಹಾಯಕ ಸಂದೇಶ ಚೌಟಾ ಅವರು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದಾರೆ.

ಜಯಲಲಿತಾ ಹಾಗೂ ಅವರ ಸಹಚರರ ವಿರುದ್ಧ ಆದಾಯಕ್ಕೆ ಮೀರಿ ಆಸ್ತಿ ಸಂಗ್ರಹಿಸಿದ ಪ್ರಕರಣದ ವಿಚಾರಣೆ ರಾಜ್ಯಕ್ಕೆ ವರ್ಗಾವಣೆಗೊಂಡ ನಂತರ ತಾಂತ್ರಿಕವಾಗಿ ರಾಜ್ಯದ ಪರವಾಗಿ ಅಭಿಯೋಜಕರನ್ನು ನಿಯೋಜಿಸುವುದು ಹಾಗೂ ವಿಚಾರಣೆಗೆ ಪೂರಕವಾಗಿರುವ ಜವಾಬ್ದಾರಿ ನಿರ್ವಹಣೆ ಕರ್ನಾಟಕಕ್ಕೆ ಅನಿವಾರ್ಯವಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ ಜಯಲಲಿತಾ ಅವರ ವಿರುದ್ಧ ತೀರ್ಪು ನೀಡಿತ್ತು. ಈ ಹಿನ್ನೆಲೆಯಲ್ಲಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ವಿಶೇಷ ನ್ಯಾಯಾಲಯದ ಆದೇಶದ ವಿರುದ್ಧ ಜಯಲಲಿತಾ ರಾಜ್ಯ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಮೇ 11ರಂದು ರಾಜ್ಯ ಉಚ್ಛ ನ್ಯಾಯಾಲಯ ಜಯಲಲಿತಾ ಪರ ತೀರ್ಪು ನೀಡಿತ್ತು. ಹೀಗಾಗಿ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವ ಜವಾಬ್ದಾರಿ ರಾಜ್ಯ ಸರ್ಕಾರಕ್ಕಿತ್ತು.

ಕಾನೂನು ಹೋರಾಟದಲ್ಲಿ ಕರ್ನಾಟಕವೇ ಎಲ್ಲ ಜವಾಬ್ದಾರಿ ನಿರ್ವಹಿಸಬೇಕೆಂದು ಈ ಹಿಂದೆಯೇ ಸುಪ್ರೀಂ ಕೋರ್ಟ್ ಸೂಚಿಸಿತ್ತು. ಅಲ್ಲದೇ ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್, ವಿಶೇಷ ಅಭಿಯೋಜಕರು ಮತ್ತು ಕಾನೂನು ಇಲಾಖೆ ಮೇಲ್ಮನವಿ ಸಲ್ಲಿಸುವುದು ಸೂಕ್ತ ಎಂಬ ಅಭಿಪ್ರಾಯ ನೀಡಿತ್ತು. ಇದರ ಆಧಾರದ ಮೇಲೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಯಲಲಿತಾ ವಿರುದ್ಧ ಮೇಲ್ಮನವಿ ಸಲ್ಲಿಸುವ ನಿರ್ಧಾರ ಕೈಗೊಳ್ಳಲಾಗಿತ್ತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited