Untitled Document
Sign Up | Login    
Dynamic website and Portals
  
June 28, 2015

ಉತ್ತರಾಖಂಡದಲ್ಲಿ ಮತ್ತೆ ಪ್ರವಾಹ: 200 ಕನ್ನಡಿಗರ ಸ್ಥಿತಿ ಅತಂತ್ರ

ಡೆಹ್ರಾಡೂನ್ : 2013ರ ಜಲಪ್ರಳಯದ ಕರಾಳ ನೆನಪು ಮಾಸುವ ಮುನ್ನವೇ ಉತ್ತರಾಖಂಡಲ್ಲಿ ಮತ್ತೆ ಪ್ರವಾಹ ಮರುಕಳಿಸಿದೆ. 300ಕ್ಕೂ ಹೆಚ್ಚು ಕನ್ನಡಿಗರು ಉತ್ತರಾಖಂಡಪ್ರವಾಹ ಮತ್ತು ಭೂಕುಸಿತದಲ್ಲಿ ಸಿಲುಕಿದ್ದು, ಈ ಪೈಕಿ ಸುಮಾರು 200 ಯಾತ್ರಿಗಳ ಸ್ಥಿತಿ ಅತಂತ್ರವಾಗಿದೆ.

ಬೆಂಗಳೂರು, ತುಮಕೂರು, ಪಾವಗಡ, ಗೌರಿಬಿದನೂರು, ಮೈಸೂರು, ಬಳ್ಳಾರಿ ಸೇರಿದಂತೆ ವಿವಿಧೆಡೆಯಿಂದ ಬದರಿನಾಥ, ಕೇದಾರನಾಥ ಸೇರಿದಂತೆ ಉತ್ತರಾಖಂಡದ ಧಾರ್ಮಿಕ ಕ್ಷೇತ್ರಗಳಿಗೆ ತೆರಳಿದ್ದ ಕನ್ನಡಿಗರು ಅಲ್ಲಿ ಉಂಟಾದ ಪ್ರವಾಹ ಹಾಗೂ ಭೂಕುಸಿತದ ಪರಿಣಾಮ ದಾರಿಮಧ್ಯೆ ಸಿಲುಕಿದ್ದಾರೆ.

ಬದರಿನಾಥದ ಸತ್ಯಬಾಬಾ ಅನ್ನಕ್ಷೇತ್ರ ಸಮೀಪದ ದೀಪಕ್‌ ಲಾಡ್ಜ್ ಬಳಿ 130 ಕನ್ನಡಿಗರು ಕಳೆದ ಐದು ದಿನಗಳಿಂದ ಸರ್ಕಾರದ ಸಹಾಯಹಸ್ತಕ್ಕಾಗಿ ಕಾದು ಕುಳಿತಿದ್ದಾರೆ. 5ರಿಂದ 10 ಜನ ಮಹಿಳೆಯರು, ಐದಾರು ಮಕ್ಕಳು, ವೃದ್ಧರು ಕೂಡ ಈ ಗುಂಪಿನಲ್ಲಿದ್ದಾರೆ. ಆದರೆ, ಇದುವರೆಗೆ ನಮಗೆ ಯಾರಿಂದಲೂ ಸ್ಪಂದನೆ ಸಿಕ್ಕಿಲ್ಲ ಎಂದು ಈ ಯಾತ್ರಿಗಳು ಗೋಳು ತೋಡಿಕೊಳ್ಳುತ್ತಿದ್ದಾರೆ.

ಅಲ್ಲದೆ, ಹರಿದ್ವಾರದ ಜೋಶಿಮಠದಲ್ಲೂ 53 ಕನ್ನಡಿಗರು ಸಿಲುಕಿದ್ದಾರೆ. ಇವರೆಲ್ಲ ತುಮಕೂರು, ಶಿರಾ ಮತ್ತಿತರ ಕಡೆಗಳಿಂದ ತೆರಳಿದ್ದರು ಎನ್ನಲಾಗಿದೆ. ಈ ಯಾತ್ರಾರ್ಥಿಗಳು ಶೀಘ್ರ ದೆಹಲಿಗೆ ಬಂದು ಸೇರಲಿದ್ದಾರೆ. ಈ ಮಧ್ಯೆ ಶನಿವಾರ 29 ಕನ್ನಡಿಗರು ದೆಹಲಿಯ ಕರ್ನಾಟಕ ಭವನಕ್ಕೆ ಬಂದಿಳಿದಿದ್ದಾರೆ ಎಂದು ಭವನದ ಜಂಟಿ ನಿವಾಸಿ ಆಯುಕ್ತ ರಂಗಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಉತ್ತರಾಖಂಡದ ಪರಿಸ್ಥಿತಿ ಹಿನ್ನೆಲೆಯಲ್ಲಿ ರಾಜ್ಯದ ಕಂದಾಯ ಇಲಾಖೆ ವಿಪತ್ತು ನಿರ್ವಹಣೆ ಕೇಂದ್ರವು ದಿನದ 24 ಗಂಟೆಗಳ ಸಹಾಯವಾಣಿ ಕೇಂದ್ರವನ್ನೂ ತೆರೆದಿದ್ದು, ಅಲ್ಲಿ ಸಿಲುಕಿರಬಹುದಾದ ಕನ್ನಡಿಗರ ರಕ್ಷಣೆಗೆ ಮುಂದಾಗಿದೆ. ಆದರೆ, ಇದುವರೆಗೂ ಕೇಂದ್ರಕ್ಕೆ ಯಾವುದೇ ಕರೆಗಳು ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಧ್ಯೆ, ಮಳೆಯಿಂದ ತತ್ತರಿಸಿರುವ ಉತ್ತರಾಖಂಡದಿಂದ ದೆಹಲಿಗೆ ಆಗಮಿಸುವ ಕನ್ನಡಿಗರಿಗೆ ಕರ್ನಾಟಕ ಭವನದಲ್ಲಿ ನೆರವು ನೀಡಲಾಗುವುದು ಎಂದು ನಿವಾಸಿ ಆಯುಕ್ತರಾದ ವಂದನಾ ಗುರ್ನಾನಿ ತಿಳಿಸಿದ್ದಾರೆ.

ಉತ್ತರಾಖಂಡ ರಾಜ್ಯದ ಕಾರ್ಯದರ್ಶಿ ಮಟ್ಟದ ಐಎಎಸ್‌ ಅಧಿಕಾರಿ ಶ್ರೀಧರಬಾಬು ಅವರೊಂದಿಗೆ ಅಲ್ಲಿನ ಸ್ಥಿತಿಗತಿ ಕುರಿತು ಚರ್ಚಿಸಲಾಗಿದೆ. ಮಳೆಯಿಂದಾಗಿ ನೂರು ಮೀಟರ್‌ ಉದ್ದದ ರಸ್ತೆ ಕುಸಿದಿದ್ದು, ಅದನ್ನು ಸರಿಪಡಿಸಲಾಗುತ್ತಿದೆ. ದುರಸ್ತಿ ಕಾರ್ಯ ಪೂರ್ಣಗೊಂಡ ಕೂಡಲೇ ನೇರವಾಗಿ ದೆಹಲಿ ಮಾರ್ಗ ಸಂಚಾರ ಸುಗಮವಾಗುತ್ತದೆ. ತುರ್ತು ಚಿಕಿತ್ಸೆ ನೀಡಬೇಕಾದವರನ್ನು ಹೆಲಿಕಾಪ್ಟರ್‌ ಮೂಲಕ ಸ್ಥಳಾಂತರಿಸಲು ಅಲ್ಲಿನ ಸರ್ಕಾರ ಕ್ರಮ ಕೈಗೊಂಡಿದೆ ಶ್ರೀಧರ ಬಾಬು ತಿಳಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Agriculture & Environment

ವರುಣನ ಆರ್ಭಟಕ್ಕೆ ತತ್ತರಿಸಿದ ಜನತೆ;ಏಳು ಜನರು ಸಾವು ಇನ್ನೂ ಎರಡುದಿನ ಕಾಲ ಭಾರೀ ಮಳೆ ಎಚ್ಚರಿಕೆ
  • ವರುಣನ ಆರ್ಭಟಕ್ಕೆ ತತ್ತರಿಸಿದ ಜನತೆ;ಏಳು ಜನರು ಸಾವು ಇನ್ನೂ ಎರಡುದಿನ ಕಾಲ ಭಾರೀ ಮಳೆ ಎಚ್ಚರಿಕೆ
  • ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಸುರಿದ ಭಾರಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಅಮಳೆ ಅವಾಂತರಗಳಿಂದ ಸಂಭವಿಸಿದ ಅನಾಹುತಗಳಲ್ಲಿ ಏಳು ಜನರು ನೀರುಪಾಲಾಗಿದ್ದಾರೆ.
  • ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಬಿಹಾರ, ಒಡಿಶಾದಲ್ಲಿ ಚಂಡಮಾರುತ
  • ವರುಣನ ಅರ್ಭಟಕ್ಕೆ 8 ಜನರು ಬಲಿ: ಮೃತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ಪರಿಹಾರ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited