Untitled Document
Sign Up | Login    
Dynamic website and Portals
  
June 30, 2015

ಬಿಬಿಎಂಪಿ ಚುನಾವಣೆ ತಡೆಗೆ ಸುಪ್ರೀಂ ಮೆಟ್ಟಿಲೇರಿದ ಸರ್ಕಾರ

BW News Bureau : ಬಿಬಿಎಂಪಿ ಚುನಾವಣೆಯನ್ನು ಮುಂದೂಡಬೇಕೆಂದು ಶತಾಯ ಗತಾಯ ಪ್ರಯತ್ನಿಸುತ್ತಿರುವ ರಾಜ್ಯ ಸರ್ಕಾರ ಅಂತಿಮ ಹೋರಾಟದ ಭಾಗವಾಗಿ ಇದೀಗ ಸುಪ್ರೀಂಕೋರ್ಟ್‌ನ ಮೊರೆ ಹೋಗಿದೆ.

2011ರ ಜನಗಣತಿ ಆಧಾರದ ಮೇಲೆ ಹೊಸ ಮೀಸಲಾತಿ ಪಟ್ಟಿ ತಯಾರಿಸಿ ಚುನಾವಣೆ ನಡೆಸಲು ಅವಕಾಶ ನೀಡಬೇಕು. ಇದಕ್ಕಾಗಿ ಚುನಾವಣೆ ನಡೆಸಲು ಸರ್ಕಾರಕ್ಕೆ ಇನ್ನಷ್ಟು ಕಾಲಾವಕಾಶ ನೀಡಬೇಕೆಂದು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ.

ಬಿಬಿಎಂಪಿ ಚುನಾವಣೆಗೆ ಚುನಾವಣಾ ಆಯೋಗವು ಈಗಾಗಲೇ ದಿನಾಂಕ ನಿಗದಿ ಪಡಿಸಿ ಘೋಷಣೆ ಕೂಡಾ ಮಾಡಿದೆ. ಆದರೆ ಇನ್ನೂ ಅಧಿಸೂಚನೆ ಹೊರಡಿಸಿಲ್ಲ. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್‌ ಗೆ ಮೇಲ್ಮನವಿ ಸಲ್ಲಿಸಿರುವ ರಾಜ್ಯ ಸರ್ಕಾರ, 2001 ಮತ್ತು 2011ರ ಜನಗಣತಿಗೂ ಸಾಕಷ್ಟು ವ್ಯತ್ಯಾಸಗಳಿವೆ. ಕೆಲ ವಾರ್ಡ್‌ಗಳಲ್ಲಿ ಜನಸಂಖ್ಯೆಯಲ್ಲಿ ಅಪಾರ ಪ್ರಮಾಣದ ವ್ಯತ್ಯಾಸ ಕಂಡು ಬಂದಿದೆ. ಈಗ 2001 ಜನಗಣತಿ ಪ್ರಕಾರ ಮೀಸಲಾತಿ ನಿಗದಿಪಡಿಸಿರುವುದರಿಂದ ಹಲವು ವರ್ಗಗಳಿಗೆ ಅನ್ಯಾಯವಾಗಲಿದೆ. ಇದನ್ನು ಸರಿಪಡಿಸಲು 2011ರ ಜನಗಣತಿ ಪ್ರಕಾರ ಮೀಸಲಾತಿ ಪಟ್ಟಿಯನು ಪರಿಷ್ಕರಿಸಬೇಕಾಗಿದೆ. ಆದಕಾರಣ ಪರಿಷ್ಕೃತ ಮೀಸಲಾತಿ ಪಟ್ಟಿ ತಯಾರಿಸಿ ಚುನಾವಣೆ ನಡೆಸಲು ಅವಕಾಶ ನೀಡಿ ಸರ್ಕಾರಕ್ಕೆ ಇನ್ನಷ್ಟು ಕಾಲಾವಕಾಶ ನೀಡಬೇಕೆಂದು ಕೋರಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : BBMP

ರಸ್ತೆ ಗುಂಡಿ ಮುಚ್ಚಲು 10 ದಿನಗಳ ಗಡುವು: ಬಿಬಿಎಂಪಿ ಅಧಿಕಾರಿಗಳಿಗೆ ಸಿಎಂ ಆದೇಶ
  • ರಸ್ತೆ ಗುಂಡಿ ಮುಚ್ಚಲು 10 ದಿನಗಳ ಗಡುವು: ಬಿಬಿಎಂಪಿ ಅಧಿಕಾರಿಗಳಿಗೆ ಸಿಎಂ ಆದೇಶ
  • ನಗರದ ರಸ್ತೆ ಗುಂಡಿಗಳನ್ನು 10 ದಿನದೊಳಗೆ ಮುಚ್ಚುವಂತೆ ಸಿಎಂ ಸಿದ್ದರಾಮಯ್ಯ ಅವರು ಬಿಬಿಎಂಪಿ ಅಧಿಕಾರಿಗಳಿಗೆ ಖಡಕ್ ಸೂಚನೆ ರವಾನಿಸಿದ್ದಾರೆ.
  • ಬಿಬಿಎಂಪಿ ನೂತನ ಆಯುಕ್ತರಾಗಿ ಮಂಜುನಾಥ್ ಪ್ರಸಾದ್ ನೇಮಕ
  • ಬೆಂಗಳೂರಲ್ಲಿ ಕಸ ವಿಂಗಡಣೆ ಕಡ್ಡಾಯಗೊಳಿಸಿ ಹೈಕೋರ್ಟ್ ಆದೇಶ; ಉಲ್ಲಂಘನೆಗೆ ಭಾರೀ ದಂಡ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited