ಜಮ್ಮು : ಬುಧವಾರದಿಂದ ಪ್ರಾರಂಭವಾದ ಹಿಂದುಗಳ ಪವಿತ್ರ ಅಮರನಾಥ ಯಾತ್ರಿಕರ ಮೇಲೆ ದಾಳಿ ನಡೆಸಲು ಪಾಕಿಸ್ಥಾನ ಮೂಲದ ಉಗ್ರ ಸಂಘಟನೆಗಳು ಸಂಚು ರೂಪಿಸಿವೆ ಎಂದು ಗುಪ್ತಚರ ಮೂಲಗಳು ಎಚ್ಚರಿಕೆ ನೀಡಿವೆ.
ಈಗಾಗಲೇ ಗಡಿಭಾಗದಿಂದ 10-15 ಉಗ್ರರು ಕಾಶ್ಮೀರವನ್ನು ಪ್ರವೇಶಿಸಿದ್ದು, ಯಾವುದೇ ಸಮಯದಲ್ಲಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಮೂಲಗಳು ಎಚ್ಚರಿಕೆ ನೀಡಿವೆ.
ಈ ಹಿನ್ನಲೆಯಲ್ಲಿ ಭಾರತೀಯ ಸೈನ್ಯ ಆಪರೇಶನ್ ಶಿವಾ ಪ್ರಾರಂಭಿಸಿದ್ದು, 7,500 ಸೈನಿಕರು 10-15 ಉಗ್ರರನ್ನು ಪತ್ತೆ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ. ಕೇಂದ್ರ ಅರೆಸೇನಾ ಪಡೆ ಮತ್ತು ಸ್ಥಳೀಯ ಪೋಲೀಸ್ 10,000 ಭದ್ರತಾ ಸಿಬ್ಬಂದಿಗಳನ್ನು ಯಾತ್ರಾರ್ಥಿಗಳ ರಕ್ಷಣೆಗಾಗಿ ನಿಯೋಜಿಸಿದೆ.
ಬುಧವಾರದಿಂದ ಪ್ರಾರಂಭವಾದ ಯಾತ್ರೆಯಲ್ಲಿ ಸುಮಾರು 1,200 ಯಾತ್ರಾರ್ಥಿಗಳು ಅಮರನಾಥಕ್ಕೆ ಪ್ರಯಾಣ ಬೆಳೆಸಿದರು. 59 ದಿನಗಳ ಕಾಲ ಈ ಯಾತ್ರೆ ನಡೆಯಲಿದೆ.