Untitled Document
Sign Up | Login    
Dynamic website and Portals
  
July 3, 2015

ಬಿಬಿಎಂಪಿ ಚುನಾವಣೆ: ರಾಜ್ಯಕ್ಕೆ 8 ವಾರಗಳ ಗಡವು ನೀಡಿದ ಸುಪ್ರೀಂ

ಸುಪ್ರೀಂಕೋರ್ಟ್ ಸುಪ್ರೀಂಕೋರ್ಟ್

BW News Bureau : ಸುಪ್ರೀಂಕೋರ್ಟ್ ಮುಖ್ಯನ್ಯಾಯಾಪೀಠ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಯನ್ನು 8 ವಾರಗಳ ಕಾಲ ಮುಂದೂಡಲು ಆದೇಶ ನೀಡಿದೆ.

ಮಹಾನಗರ ಪಾಲಿಕೆಯ ಚುನಾವಣೆ ಮುಂದೂಡುವಂತೆ ಸುಪ್ರೀಂಕೋರ್ಟ್ ಗೆ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ನಡೆಸಿದ ಸುಪ್ರೀಂಕೋರ್ಟ್, ಬಿಬಿಎಂಪಿ ಚುನಾವಣೆ ನಡೆಸಲು 8 ವಾರಗಳ ಗಡವು ನೀಡಿದ್ದು, ಹಳೇ ಮೀಸಲಾತಿ ಅನ್ವಯದಂತೆ ಅಕ್ಟೋಬರ್ 5ರೊಳಗೆ ಚುನಾವಣೆ ನಡೆಸುವಂತೆ ಸೂಚಿಸಿದೆ.

ಕರ್ನಾಟಕ ಸರಕಾರದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ಎಚ್.ಎಲ್.ದತ್ತು ಅವರು 2 ತಿಂಗಳು (8 ವಾರ) ಚುನಾವಣೆ ಮುಂದೂಡಲು ಆದೇಶ ನೀಡಿದ್ದಾರೆ.

ರಾಜ್ಯ ಚುನಾವಣಾ ಆಯೋಗ ಹಳೆ ಮೀಸಲಾತಿ ಅನ್ವಯದಂತೆ ಜುಲೈ 28 ರಂದು ಬಿಬಿಎಂಪಿ ಚುನಾವಣೆ, ಜು 31 ಕ್ಕೆ ಫಲಿತಾಂಶ ಪ್ರಕಟ ಎಂದು ಘೋಷಿಸಿತ್ತು. ಇದೀಗ ಸುಪ್ರೀಂ ಆದೇಶದ ಹಿನ್ನೆಲೆಯಲ್ಲಿ ಅಕ್ಟೋಬರ್ ಒಳಗೆ ಬಿಬಿಎಂಪಿ ಚುನಾವಣೆಯನ್ನು ಪೂರ್ಣಗೊಳಿಸಬೇಕಾಗಿದೆ.

2011 ರ ಜನಗಣತಿ ಪ್ರಕಾರ ಮೀಸಲು ನಿಗದಿ, ಕ್ಷೇತ್ರ ಪುನರ್ ವಿಂಗಡಣೆಗೆ ಅವಕಾಶ ಕೊಡುವಂತೆ ಕೋರಿತ್ತು. ಕ್ಷೇತ್ರ ಪುನರ್ ವಿಂಗಡಣೆ, ಹೊಸ ಮೀಸಲಾತಿ ಕುರಿತ ವಾದ ಮಂಡನೆಯನ್ನು ಸುಪ್ರೀಂಕೋರ್ಟ್ ತಳ್ಳಿಹಾಕಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : BBMP

ರಸ್ತೆ ಗುಂಡಿ ಮುಚ್ಚಲು 10 ದಿನಗಳ ಗಡುವು: ಬಿಬಿಎಂಪಿ ಅಧಿಕಾರಿಗಳಿಗೆ ಸಿಎಂ ಆದೇಶ
  • ರಸ್ತೆ ಗುಂಡಿ ಮುಚ್ಚಲು 10 ದಿನಗಳ ಗಡುವು: ಬಿಬಿಎಂಪಿ ಅಧಿಕಾರಿಗಳಿಗೆ ಸಿಎಂ ಆದೇಶ
  • ನಗರದ ರಸ್ತೆ ಗುಂಡಿಗಳನ್ನು 10 ದಿನದೊಳಗೆ ಮುಚ್ಚುವಂತೆ ಸಿಎಂ ಸಿದ್ದರಾಮಯ್ಯ ಅವರು ಬಿಬಿಎಂಪಿ ಅಧಿಕಾರಿಗಳಿಗೆ ಖಡಕ್ ಸೂಚನೆ ರವಾನಿಸಿದ್ದಾರೆ.
  • ಬಿಬಿಎಂಪಿ ನೂತನ ಆಯುಕ್ತರಾಗಿ ಮಂಜುನಾಥ್ ಪ್ರಸಾದ್ ನೇಮಕ
  • ಬೆಂಗಳೂರಲ್ಲಿ ಕಸ ವಿಂಗಡಣೆ ಕಡ್ಡಾಯಗೊಳಿಸಿ ಹೈಕೋರ್ಟ್ ಆದೇಶ; ಉಲ್ಲಂಘನೆಗೆ ಭಾರೀ ದಂಡ
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited