ಬೆಂಗಳೂರು : ರೈತರ ಆತ್ಮಹತ್ಯೆ ಮುಂದುವರಿದಿದ್ದು, ಶುಕ್ರವಾರ ರಾಜದಲ್ಲಿ ಒಟ್ಟು 4 ರೈತರು ಅತ್ಮಹತ್ಯೆ ಮಾಡಿಕೊಡಿದ್ದಾರೆ. ಸಾಲಬಾಧೆ ತಾಳಲಾರದೆ, ಕೊಪ್ಪಳ ಜಿಲ್ಲೆಯ ಗಂಗಾವತಿ, ಚಿತ್ರದುರ್ಗ ಮತ್ತು ಮೈಸೂರು ಸೇರಿ ಒಟ್ಟು ನಾಲ್ವರು ರೈತರು ಅತ್ಮಹತ್ಯೆ ಮಾಡಿಕೊಡಿದ್ದಾರೆ.
ಚಿತ್ರದುರ್ಗದಲ್ಲಿ ರೈತ 30 ವರ್ಷದ ರಂಗಪ್ಪ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೊಪ್ಪಳದ ಗಂಗಾವತಿಯಲ್ಲಿ 60 ವರ್ಷದ ಶೇಖರ್ ಗೌಡ, ಭೋಗ್ಯಕ್ಕೆ ಜಮೀನು ಪಡೆದು ಕೃಷಿ ಮಾಡುತ್ತಿದ್ದ. ಖಾಸಗಿ ಕಂಪನಿಗಳಿಂದ ಸಾಲ ಪಡೆದಿದ್ದ ಶೇಖರ್ ಗೌಡ, ಜಮೀನಿನಲ್ಲಿ ವಿಷ್ ಸೇವಿಸಿ ಸಾವಿಗೆ ಶರಣಾಗಿದ್ದಾನೆ.
ಮೈಸೂರಿನ ಹುಣಸೂರಿನಲ್ಲೂ 42 ವರ್ಷದ ರೈತ ಸಣ್ಣ ಸ್ವಾಮಿ ಗೌಡ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ತಿಳಿದು ಬಂದಿದೆ.
ಎರಡು ದಿನಗಳ ಹಿಂದೆ ವಿಷ ಸೇವಿಸಿ ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲಾಗಿದ್ದ 50 ವರ್ಷದ ಮಹದೇವ ನಾಯಕ್ ಶುಕ್ರವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.