BW News Bureau : ಬೆಂಗಳೂರು ಮಹಾನಗರ ಪಾಲಿಕೆ ವಿಭಜನೆ ಕುರಿತು ರಾಜ್ಯ ಸರ್ಕಾರ ನೇಮಿಸಿದ್ದ ನಿವೃತ್ತ ಮುಖ್ಯ ಕಾರ್ಯದರ್ಶಿ ಬಿ ಎಸ್ ಪಾಟೀಲ್ ಸಮಿತಿ ಸೋಮವಾರ ಬಿಬಿಎಂಪಿಯನ್ನು ಐದು ಭಾಗಗಳಾಗಿ ವಿಭಜನೆ ಮಾಡಬೇಕೆಂಬ ಶಿಫಾರಸು ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಲ್ಲಿಸಿದೆ.
ಸೋಮವಾರ ಸಲ್ಲಿಸಿದ ವರದಿಯಲ್ಲಿ ಬಿಬಿಎಂಪಿಯನ್ನು ಐದು ಭಾಗಗಳನ್ನಾಗಿ ವಿಭಜಿಸಬೇಕು, ಐದು ಮೇಯರ್, ಐದು ಉಪಮೇಯರ್ ಹಾಗೂ 198 ವಾರ್ಡ್ ಗಳ ಪುನರ್ ವಿಂಗಡಣೆ ಮಾಡಬೇಕೆಂದು ಸಮಿತಿ ಶಿಫಾರಸು ಮಾಡಿದೆ. ಮುಂದಿನ 25 ವರ್ಷಗಳ ದೂರದೃಷ್ಟಿ ಇಟ್ಟುಕೊಂಡು ಈ ವರದಿ ಸಿದ್ದಪಡಿಸಲಾಗಿದೆ.
ಈ ಕುರಿತು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಮಿತಿ ವರದಿಯನ್ನು ಸಲ್ಲಿಸಿದೆ, ವರದಿಯನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಶೀಘ್ರದಲ್ಲಿ ಸೆಲೆಕ್ಟ್ ಸಮಿತಿ ವರದಿ ಬರಲಿದೆ, ಸೆಲೆಕ್ಟ್ ಕಮಿಟಿ ವರದಿ ಬಳಿಕ ಮುಂದಿನ ಕ್ರಮ ಎಂದು ತಿಳಿಸಿದ್ದಾರೆ.